ಪೋಸ್ಟ್‌ಗಳು

ಆಗಸ್ಟ್, 2025 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸಾಮಾಜಿಕ ನ್ಯಾಯವೇ ಅಂಬೇಡ್ಕರ್ ದೃಷ್ಠಿಕೋನದ ಆತ್ಮ

ಇಮೇಜ್
      ಸುದ್ದಿ ಮಾಧ್ಯಮದ ಆತ್ಮ ಆಗಿರುವ ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಇದೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್.ಸಿ, ಎಸ್.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಸುದ್ದಿ ಮಾಧ್ಯಮದಲ್ಲಿ  ಅಂಬೇಡ್ಕರ್ ದೃಷ್ಟಿಕೋನ” ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮøತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ವಿಷಾದ ವ್ಯಕ್ತಪಡಿಸಿದರು. ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಶೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೆÇಟ್ಟಣವೇ ಹೆಚ್ಚಾಗಿ ಕಂಡುಬರುತ್ತದೆ.  ಕಡ್ಡಿ ಗೀರಿ ಬೆಂಕಿ ಹಚ್ಚುವ ಅವಕಾಶ...

ಡಿ.ದೇವರಾಜ ಅರಸು-ಇತಿಹಾಸದಲ್ಲಿ ಎಂದಿಗೂ ಅಳಿಸಲಾಗದ ಹೆಸರು : ಚಂದ್ರಭೂಪಾಲ

ಇಮೇಜ್
ಶಿವಮೊಗ್ಗ, ಆ.20 : ಮಹಾ ಮಾನವತಾವಾದಿ ಹಾಗೂ ಹಿಂದುಳಿದವರ, ನೊಂದವರ ಏಳ್ಗೆಗಾಗಿ ಶ್ರಮಿಸಿದ ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸುರವರ ಹೆಸರು ಇತಿಹಾಸದಲ್ಲಿ ಎಂದಿಗೂ ಅಳಿಸಲಾಗದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಹೇಳಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿಪರ ಸಾಧನೆಗಳ ಸರದಾರ, ಸಾಮಾಜಿಕ ಪರಿವರ್ತನೆಯ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  12 ನೇ ಶತಮಾನದಲ್ಲಿ ಹೇಗೆ ದಮನಿತರು, ಹಿಂದುಳಿದವರನ್ನು ಮುಂಚೂಣಿಗೆ ತರಲು ಅನುಭವ ಮಂಟಪದ ಮೂಲಕ ಬಸವಾದಿ ಶರಣರು ಕ್ರಾಂತಿ ನಡೆಸಿದರೋ ಅದೇ ರೀತಿಯಲ್ಲಿ ಅರಸುರವರು ಮುಖ್ಯಮಂತ್ರಿಯಾಗಿ ನಮ್ಮ ಸಂವಿಧಾನದ ಆಶಯಗಳನ್ನು, ಮಾರ್ಗಸೂಚಿಗಳನ್ನು ಅನುಷ್ಟಾನಗೊಳಿಸುವ ಮೂಲಕ ಅನೇಕ ಸುಧಾರಣೆಗಳನ್ನು ರಾಜ್ಯದಲ್ಲಿ ತಂದರು. ಇವರು ಹಿಂದುಳಿದವರು, ದಲಿತರು, ನೊಂದವರ ಏಳ್ಗೆಗಾಗಿ ಅನೇಕ ಕಾಯ್ದೆ, ಕಾರ್ಯಕ್ರಗಳು, ಯೋಜನೆಗಳನ್ನು ಜಾರಿಗೊಳಿಸಿ, ಸುಧಾರಣೆ ತಂದರು. ಇವರ ಸಾಧನೆಯನ್ನು ಎಷ್ಟು ಹೇಳಿದರೂ ಸಾಲದು. ಎಲ್ಲ ವರ್ಗಗಳನ್ನು ಗೌರವಿಸುತ್ತಿದ್ದ ಅರಸುರವರು ಹಿಂದುಳಿದ ವರ್ಗಗಳಿಗಾಗಿ ಹಾವನೂರು ವ...

ರಾಜ್ಯದಲ್ಲಿ ಮತ್ತೊಂದು ವಿದ್ಯಾರ್ಥಿ ಅತ್ಯಾಚಾರ ಮತ್ತು ಕೊಲೆ

ಇಮೇಜ್
  ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ಕೊಲೆ ಮಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಬರ್ಬರ ಹತ್ಯೆ ಮಾಡಲಾಗಿದೆ. ವರ್ಷಿತಾ ಪದವಿ ವಿದ್ಯಾರ್ಥಿನಿಯಾಗಿದ್ದು, ವರ್ಷಿತಾ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ವರ್ಷಿತಾ ಕೊಲೆಯಾಗಿದ್ದು, ನಿನ್ನೆ ವರ್ಷಿತಾ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಸಿವಿನಿಂದ ನಿತ್ರಾಣಗೊಂಡು ಮೃತಪಟ್ಟ ಎರಡು ಹುಲಿಮರಿಗಳು

ಇಮೇಜ್
ಹನೂರು ತಾಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 15 ದಿನಗಳ ಹಿಂದೆ ಹುಟ್ಟಿದ್ದ ಹೆಣ್ಣು ಮತ್ತು ಗಂಡು ಮರಿಗಳು ತಾಯಿ ಹುಲಿಯಿಂದ ಬೇರ್ಪಟ್ಟು ಸಾವನ್ನಪ್ಪಿದ್ದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಗಸ್ತಿನ ವೇಳೆ ಈ ವಿಷಯ ಅರಣ್ಯ ಇಲಾಖೆಗೆ ತಿಳಿದುಬಂದಿದ್ದು, ಕೂಡಲೇ ಡಿಸಿಎಫ್ ಸುರೇಂದ್ರ, ಎಸಿಎಫ್ ಮರಿಸ್ವಾಮಿ, ಆರ್‌ಎಫ್‌ಒ ನಿರಂಜನ್ ಸೇರಿದಂತೆ ಎಸ್‌ಓಪಿ ಸಮಿತಿಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಧಿಕಾರಿಗಳ ಪ್ರಾಥಮಿಕ ನಿರೀಕ್ಷೆಯಂತೆ, ಈ ಹುಲಿ ಮರಿಗಳು ತಾಯಿ ಹುಲಿಯಿಂದ ಕಳೆದ 10–15 ದಿನಗಳಿಂದ ವಿಭಜನೆಯಾಗಿದ್ದು, ಆಹಾರ ಹಾಗೂ ಕಾಪಾಡುವ ತೊಂದರೆಯಿಂದಾಗಿ ಎರಡು-ಮೂರು ದಿನಗಳ ವ್ಯತ್ಯಾಸದಲ್ಲಿ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. - ಬಸವರಾಜ್ ಹನೂರು 

“ಬ್ರೆಸ್ಟ್ ಫೀಡಿಂಗ್ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ”

ಇಮೇಜ್
ದಿನಾಂಕ : 05/08/2025 ರಂದು ರಾಗಿ ಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, FPA ಸಂಸ್ಥೆಯ ಸಹಯೋಗದೊಂದಿಗೆ ಗರ್ಭಿಣಿ ಸ್ತ್ರೀಯರಿಗೆ ಉಪಯುಕ್ತವಾದ ಬ್ರೆಸ್ಟ್ ಫೀಡಿಂಗ್ ಕುರಿತಂತೆ ವಿಶೇಷ ಜಾಗೃತಿ ಕಾರ್ಯಕ್ರಮ*ವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ FPA ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಪುಷ್ಪ ಶೆಟ್ಟಿಯವರು ಉಪಸ್ಥಿತರಿದ್ದು, ತಾಯಿಯ ಹಾಲು ಹುಟ್ಟಿದ ಮೊದಲ ಆರು ತಿಂಗಳು ಮಗುವಿಗೆ ಸಂಪೂರ್ಣ ಆಹಾರವಾಗಿದ್ದು, ಮಗುವಿನ ಆರೋಗ್ಯದ ಬೆಳೆವಣಿಗೆಗೆ ಹಾಗೂ ರೋಗ ನಿರೋಧಕ ಶಕ್ತಿಗೆ ಎಷ್ಟು ಸಹಾಯಕವಾಗಿರುತ್ತದೆ ಎಂಬುದರ ಬಗ್ಗೆ ಅತ್ಯಂತ ಮಾಹಿತಿ ಪೂರಿತವಾಗಿ ನುಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಶಿವಮೊಗ್ಗ ಹಾಲ್ಕೊಳದ ಸಖಿ ವನ್ ಸ್ಟಾಪ್ ಸೆಂಟರ್‌ನ ಅಡ್ಮಿನಿಸ್ಟ್ರೇಟರ್ ಶ್ರೀಮತಿ ಅಕ್ಷತಾ ರವರು, ಮಹಿಳೆಯರ ಮೇಲಿನ ಹಿಂಸೆ, ಮಾನಸಿಕ, ದೈಹಿಕ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ ವನ್ ಸ್ಟಾಪ್ ಸೆಂಟರ್ ನೀಡುವ ಸೇವೆಗಳಾದ ವೈದ್ಯಕೀಯ ನೆರವು, ನ್ಯಾಯ ಸಹಾಯ, ತಾತ್ಕಾಲಿಕ ಆಶ್ರಯ ಕುರಿತು ಸಮಗ್ರ ಮಾಹಿತಿ ನೀಡಿದರು. ಹಾಗೆಯೇ, *ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ರಮ್ಯಾ ರವರು* ಮಕ್ಕಳಿಗೆ ಅತ್ಯಂತ ಸೂಕ್ತವಾದ ಗುಡ್ಮ ಟಚ್ ಮತ್ತು ಬ್ಯಾಡ್ಕು ಟಚ್ ಕುರಿತು ಮಾಹಿತಿ ನೀಡುವ ಮೂಲಕ, ಮಕ್ಕಳ ಭದ್ರತೆ ಕುರಿತು ಮಹತ್ವದ ಅರಿವು ಮೂಡಿಸಿದರು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಚಾಲನೆ ಮಾಡಿರ...

ದೆಹಲಿಯಲ್ಲಿ ಇಂದು ನಡೆದ ಎಐಸಿಸಿಯ ರಾಷ್ಟ್ರೀಯ ಕಾನೂನು ಸಮಾವೇಶದಲ್ಲಿ ಸಿಎಂ ಸಿದ್ದು ಮಾತುಗಳು:

ಇಮೇಜ್
  ದೆಹಲಿಯಲ್ಲಿ ಇಂದು ನಡೆದ ಎಐಸಿಸಿಯ ರಾಷ್ಟ್ರೀಯ ಕಾನೂನು ಸಮಾವೇಶದಲ್ಲಿ  ಸಿಎಂ ಸಿದ್ದು ಮಾತುಗಳು: ಎಐಸಿಸಿಯ ಕಾನೂನು ವಿಭಾಗವು ಆಯೋಜಿಸಿರುವ ಈ ಅದ್ಭುತ ಮತ್ತು ಪ್ರಸ್ತುತವೆನಿಸಿರುವ ಕಾರ್ಯಕ್ರಮದಲ್ಲಿ, ಸಮಾನತೆ ಮತ್ತು ಭ್ರಾತೃತ್ವದ ವಿಚಾರಗಳ ಆಧಾರದ ಮೇಲೆ ಸಾಮಾಜಿಕ ನ್ಯಾಯದ ಸಾಂವಿಧಾನಿಕ ಆದರ್ಶಗಳನ್ನು ಅನ್ವೇಷಿಸಲು ನಾವು ಪ್ರಾರಂಭಿಸಿರುವ ಹೊತ್ತಿನಲ್ಲಿಯೇ, ಭಾರತವನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ನಡೆಸಿದ ನಮ್ಮ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಈ ರಾಷ್ಟ್ರದ ಅತ್ಯುತ್ತಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಉನ್ನತ ಆದರ್ಶಗಳ ಪರಂಪರೆಯನ್ನು ಹಿಂತಿರುಗಿ ನೋಡಬೇಕಿದೆ. ನ್ಯಾಯದ ಕಲ್ಪನೆಯನ್ನು ಸಮಾನತೆಯ ತಳಹದಿಯ ಮೇಲೆ ನಿರ್ಮಿಸಲಾಗಿದೆ. ಭಾರತದ ಸಂವಿಧಾನವು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಭ್ರಾತೃತ್ವದ ಸಾಕಾರ ರೂಪವಾಗಿದೆ. ನಮ್ಮ ಪೂರ್ವಜರ ಕನಸಾದ ಜಾತಿರಹಿತ, ವರ್ಗರಹಿತ, ಸಮಾಜವಾದಿ ಸಮಾಜವನ್ನು ಸಾಧಿಸುವ ಗುರಿಯನ್ನು ಇದು ಹೊಂದಿದೆ. ಮೂಲಭೂತ ಹಕ್ಕುಗಳ ರಕ್ಷಕ ದೇವತೆ ಎಂದು ಕರೆಯಲ್ಪಡುವ ಭಾರತೀಯ ಸಂವಿಧಾನವು ಭಾರತೀಯ ಸಮಾಜದಲ್ಲಿ ಸಂಪನ್ಮೂಲಗಳ ವಿತರಣೆಯಲ್ಲಿನ ಐತಿಹಾಸಿಕ ಅಸಮಾನತೆಗಳು ಮತ್ತು ಸಮಾನ ಅವಕಾಶಗಳ ನಿರಾಕರಣೆಯನ್ನು ಗಮನದಲ್ಲಿಟ್ಟುಕೊಂಡು ಸಾಮಾಜಿಕ ನ್ಯಾಯದ ಅತ್ಯಂತ ವಿಶಿಷ್ಟ ಪರಿಕಲ್ಪನೆಯನ್ನು ಚಿತ್ರಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಜನಸಂಖ್ಯೆಯ ಒಂದು ದೊಡ್ಡ ಭಾಗವು ಮೂಲಭೂತ ಹಕ್ಕುಗಳಿಂ...