ಪರಿಸರ ಸಂರಕ್ಷಣೆ ಮಾಡಲು ಪ್ರಬಲ ಇಚ್ಛಾ ಶಕ್ತಿ ಬೇಕು : ಡಾ. ಶುಭಾ ಮರವಂತೆ
ಪರಿಸರ ಸಂರಕ್ಷಣೆ ಮಾಡಲು ಪ್ರಬಲ ಇಚ್ಛಾ ಶಕ್ತಿ ಬೇಕು : ಡಾ. ಶುಭಾ ಮರವಂತೆ ರೋಟರಿ ಉತ್ತರ 3182 ಹಾಗೂ ಅಂತಾರಾಷ್ಟ್ರೀಯ ರೋಟರಿ ಮೊಡೆಷ್ಟೋ ಯುನೈಟೆಡ್ ಸ್ಟೇಟ್ಸ್ ನ ಆಶ್ರಯದಲ್ಲಿ ರೋಟರಿ ಕ್ಲಬ್ ಕೈಗೊಂಡ ತುಂಗಾ ಮೇಲ್ದಡೆ ಜೀವ ವೈವಿಧ್ಯ ಅರಣ್ಯ ಯೋಜನೆಯಲ್ಲಿ ಅಧಿಕಾರಿಗಳನ್ನು ತರಬೇತಿ ನೀಡುವ ಒಂದು ದಿನದ ಕಾರ್ಯಾಗಾರವನ್ನು ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ಏರ್ಪಡಿಸಲಾಗಿದ್ದು, ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಯಾದ ಡಾ. ಶುಭಾ ಮರವಂತೆಯವರು, " ಪಶ್ಚಿಮಘಟ್ಟಗಳ ಸಮೃದ್ಧಿ ಜೀವ ವೈವಿಧ್ಯತೆಯ ಕಕ್ಷೆ ನಮ್ಮ ಶಿವಮೊಗ್ಗ ಜಿಲ್ಲೆಯು ಪರಿಸರ ಸಂರಕ್ಷಣೆಯ ವಿಷಯದಲ್ಲಿ ತುಂಬಾ ಅಪಾಯದಲ್ಲಿದೆ. ನಿರಂತರ ಕಾಡು ನಾಶದಿಂದಾಗಿ ಪರಿಸದ ಜೀವ ಸಂಕುಲಗಳು ಅಳಿವಿನ ಅಂಚಿಗೆ ತಲುಪಿವೆ. ಮನುಷ್ಯನ ಸ್ವಾರ್ಥ, ದುರಾಸೆಗಳಿಂದಾಗಿ ಅತಿಯಾದ ಹವಾಮಾನ ವೈಪರಿತ್ಯಗಳನ್ನು ಎದುರಿಸುತ್ತಿದ್ದೇವೆ. ಇಂದು ಪರಿಸರ ಉಳಿಸಿಕೊಳ್ಳುವ ಬಹುದೊಡ್ಡ ಹೊಣೆಗಾರಿಕೆಗೆ ನಾವು ಮುಂದಾಗಬೇಕಿದೆ. ಅದಕ್ಕಾಗಿ ನಮಗೆ ಪ್ರಬಲ ಇಚ್ಛಾ ಶಕ್ತಿ ಬೇಕಾಗುತ್ತದೆ " ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಉತ್ತರದ ಅಧ್ಯಕ್ಷರಾದ ಶ್ರೀ ಆರ್.ಬಸವರಾಜಪ್ಪನವರು " ತುಂಗಾ ಮೇಲ್ದಡೆ ಯೋಜನೆಯ ಪರಿಸರವನ್ನು ಜೀವ ವೈವಿಧ್ಯತೆಯ ತಾಣವಾಗಿ ರೂಪಿಸಲು ನಾ...