ಬೆಳಗಾವಿಯಲ್ಲಿ ವಾಲ್ಮೀಕಿ ಬೇಡರ ಸಮುದಾಯದ ಕುರಿತು ರಮೇಶ ಕತ್ತಿ ನೀಡಿರುವ ಅವಹೇಳನಕಾರಿ ಹೇಳಿಕೆ : ವಿರೋಧ ವ್ಯಕ್ತ ಪಡಿಸಿದ ಸತೀಶ್ ಜಾರಕಿಹೊಳಿ ಸಚಿವರು

     

      ಬೆಳಗಾವಿಯಲ್ಲಿ ವಾಲ್ಮೀಕಿ ಬೇಡರ ಸಮುದಾಯದ ಕುರಿತು ರಮೇಶ ಕತ್ತಿ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮೇಲ್ನೋಟಕ್ಕೆ ಅದು ನಿಜವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇಂತಹ ಅಸಂವೇದನಾಶೀಲ ಮಾತುಗಳು ಸಮಾಜದ ಸೌಹಾರ್ದತೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ಗಂಭೀರ ಧಕ್ಕೆ ತರುತ್ತವೆ. ಆದ್ದರಿಂದ, ಕಾನೂನಿನ ಪ್ರಕಾರ ತನಿಖೆಯನ್ನು ಕೈಗೊಂಡು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಕೂಡ ಆಗ್ರಹಿಸುತ್ತೇನೆ.

        ಜಾತಿಯಂತಹ ವಿಷವನ್ನು ಬೇರುಸಹಿತ ನಿರ್ಮೂಲನೆಗೊಳಿಸಲು ತಮ್ಮ ಜೀವನವನ್ನೇ ಅರ್ಪಿಸಿದ ಮಹಾನ್ ತತ್ವಜ್ಞಾನಿಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ “ಸಮಾನತೆ, ಮಾನವೀಯತೆ ಮತ್ತು ಸಹೋದರತೆ” ಎಂಬ ಸಿದ್ಧಾಂತಗಳೇ ನಮ್ಮ ಮಾರ್ಗ ಮತ್ತು ದಾರಿದೀಪವಾಗಬೇಕು — “ನಾ ಹೆಚ್ಚು, ನೀ ಹೆಚ್ಚು” ಎಂಬ ಜಾತಿಯ ವಿಷವಲ್ಲ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ