ಒಕ್ಕಲಿಗರ ಮಹಿಳಾ ವೇದಿಕೆಯಿಂದ ಮಲೆನಾಡು ಮೇಳ ಜನವರಿ 7ಕ್ಕೆ

ಶಿವಮೊಗ್ಗ: ಪಂಪ ನಗರದಲ್ಲಿರುವ ಜಿಲ್ಲಾ ಒಕ್ಕಲಿಗರ ಮಹಿಳಾ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಜನವರಿ 7ರಂದು ಬೆಳಗ್ಗೆ 9.30ಕ್ಕೆ ಮಲೆನಾಡು ಮೇಳ ಆಯೋಜಿಸಲಾಗಿದೆ.

ವಿದ್ಯಾ ನಾಗೇಶ್, ಪ್ರಭಾ ಶ್ರೀನಾಥ್ ಅವರು ಮಲೆನಾಡು ಮೇಳ ಉದ್ಘಾಟಿಸುವರು. ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ  ರಮೇಶ್ ಹೆಗಡೆ ಅಧ್ಯಕ್ಷತೆ ವಹಿಸುವರು. ಕಾರ್ಯನಿರ್ವಾಹಕ ಅಭಿಯಂತರ ಬಿ.ಇ.ವಿರೇಂದ್ರ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಉಪಸ್ಥಿತರಿರುವರು. ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಪ್ರೇಮಾ ವೆಂಕಟೇಶ್, ಕಾರ್ಯದರ್ಶಿ ಕಾವ್ಯ ಸತೀಶ್, ಖಜಾಂಚಿ ಸೌರಭ ಹರ್ಷ ಹಾಗೂ ಸಂಘದ ಸದಸ್ಯನಿಯರು ಉಪಸ್ಥಿತರಿರುವರು.

ಕಾಂಚಿಪುರಂನಿಂದ ಬರುತ್ತಿರುವ ರೇಷ್ಮೆ ಸೀರೆಗಳ ನೇರ  ಮಾರಾಟ, ಫ್ಯಾನ್ಸಿ ಸೀರೆಗಳು, ಡ್ರೆಸ್, ಬೆಡ್ ಲೈನರ್, ಗೃಹಪಯೋಗಿ ವಸ್ತುಗಳು, ಅಲಂಕಾರಿಕ ಸಾಮಾಗ್ರಿಗಳು, ಮನೆಯಲ್ಲಿ ತಯಾರಿಸಿದ ರುಚಿಕರ ಸಸ್ಯಾಹಾರಿ ಹಾಗೂ ಮಾಂಸಾಹಾರಿ ತಿನಿಸುಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಳೆಯ ಝರಿ ಸೀರೆಯನ್ನು ಒಳ್ಳೆಯ ಬೆಲೆಯಲ್ಲಿ ತೆಗೆದುಕೊಳ್ಳಲಾಗುವುದು. ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರುವ ಮಹಿಳಾ ಉದ್ಯಮಿಗಳನ್ನು ಹುರಿದುಂಬಿಸಲು ಪ್ರತಿ ವರ್ಷ ಮೇಳ ಆಯೋಜಿಸಲಾಗುತ್ತಿದೆ ಎಂದು ಸ್ಟಾಲ್ ನಿರ್ವಾಹಕರಾದ ಅಂಜು ಸುರೇಶ್ ಹಾಗೂ ಸುಪ್ರಿಯಾ ರಾಮಪ್ಪ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9964022158, 7019659461, 9945770711 ಸಂಪರ್ಕಿಸಬಹುದಾಗಿದೆ.

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ