ವಿಕಸಿತ ಭಾರತದೆಡೆಗೆ ಸದೃಢ ಹೆಜ್ಜೆ
ಶಿವಮೊಗ್ಗ: ಭಾರತವು ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ ಕಾರ್ಯಕ್ರಮಗಳಿಂದ ವಿಕಸಿತ ಭಾರತ ಆಗುತ್ತಿದ್ದು, ಮೂರನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗುವತ್ತ ಮುನ್ನುಗುತ್ತಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಉತ್ತಮ ಸಂವಿಧಾನ ಭಾರತ ದೇಶದಲ್ಲಿ ರಚನೆಯಾಗಿದ್ದು, ಈ ದಿನ ಭಾರತದ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವ ಆಡಳಿತವನ್ನು ಆಚರಿಸುತ್ತದೆ. ವೈವಿಧ್ಯತೆಯಲ್ಲಿ ಏಕತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಎತ್ತಿ ತೋರಿಸುತ್ತದೆ. ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯದ ತತ್ವಗಳನ್ನು ಬಲಪಡಿಸುವ ದಿನವಾಗಿದೆ ಎಂದು ತಿಳಿಸಿದರು.
ಸಂಘದ ಮಾಜಿ ಅಧ್ಯಕ್ಷ ಕೆ.ವಿ.ವಸಂತ್ಕುಮಾರ್ ಮಾತನಾಡಿ, ದೇಶದ ಐಕ್ಯತೆ, ಏಕತೆ ಮತ್ತು ಅಖಂಡತೆ ಬಗ್ಗೆ, ದೇಶದ ಅಭಿವೃದ್ದಿಯಲ್ಲಿ ನಮ್ಮ ಜವಾಬ್ದಾರಿ ಕರ್ತವ್ಯಗಳನ್ನು ನಿರ್ವಹಿಸುವ ಬಗ್ಗೆ ಜನತೆಯ ಸಹಕಾರದ ಪ್ರಾಮುಖ್ಯತೆ ತಿಳಿಸಿದರು.
ಸಂಘದ ಮಾಜಿ ಅಧ್ಯಕ್ಷ ಜೆ.ಆರ್.ವಾಸುದೇವ ಮಾತನಾಡಿ, ದೇಶದಲ್ಲಿ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಹೆಚ್ಚಿನ ಸಾಧನೆ ಮಾಡುತ್ತಿದೆ. ಪ್ರಜೆಗಳಾದ ನಾವು ಸಂವಿಧಾನದ ಹಕ್ಕು, ಜವಾಬ್ದಾರಿಯನ್ನು ಅರಿಯುವಲ್ಲಿ ನಾವು ತುಂಬಾ ಹಿಂದಿದ್ದೇವೆ. ದೇಶದ ಅಭಿವೃದ್ಧಿಯಲ್ಲಿ ಮುಂದಿನ ಪೀಳಿಗೆಗೆ ತಿಳಿಹೇಳುವ ಜವಾಬ್ದಾರಿ ನಮ್ಮ ಮೇಲಿದೆ. ಯುವಜನರನ್ನು ದೇಶಭಿಮಾನದ ಕಡೆ ಸೆಳೆಯುವ ಪ್ರಯತ್ನವಾಗಬೇಕಿದೆ ಎಂದರು.
ಸAಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ಮಾಜಿ ಅಧ್ಯಕ್ಷ ಕೆ.ವಿ.ವಸಂತ್ಕುಮಾರ್, ಟಿ.ಆರ್.ಆಶ್ವಥ್ನಾರಾಯಣ ಶೆಟ್ಟಿ, ಜೆ.ಆರ್.ವಾಸುದೇವ, ಡಿ.ಎಸ್.ನಟರಾಜ್, ನಿರ್ದೇಶಕರಾದ ಎಸ್.ಎಸ್.ಉದಯಕುಮಾರ್, ಪಿ.ರುದ್ರೇಶ್, ಪ್ರದೀಪ್ ವಿ.ಎಲಿ, ಗಣೇಶ ಎಂ.ಅಂಗಡಿ, ವಿನೋದ್ಕುಮಾರ್ ಜೈನ್, ಕೆ.ಎನ್.ರಾಜಶೇಖರ್, ಬಿ.ಸುರೇಶ್ ಕುಮಾರ್, ಸಂಯೋಜಿತ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಉಮೇಶ್ ಶಾಸ್ತ್ರಿ, ಪ್ರಶಾಂತ್ ಶಾಸ್ತ್ರಿ, ಎಂ.ಸಿ.ದೇವರಾಜ್, ಶಿವರಾಜ್ ಉಡುಗಣಿ, ಚಂದ್ರಶೇಖರ್ ಉಪಸ್ಥಿತರಿದ್ದರು.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ