ಸತ್ತ ಮೇಲೆ ನೀಡುವ ಸೌಲಭ್ಯಗಳನ್ನು ಬದುಕಿದ್ದಾಗಲೇ ನೀಡಿ ಪತ್ರಿಕಾ ವಿತರಕರ ಒಕ್ಕೂಟ ಆಗ್ರಹ!!

 


ಶಿವಮೊಗ್ಗ: ಪತ್ರಿಕಾ ವಿತರಕರಿಗೆ ಸತ್ತ ಮೇಲೆ ಅಪಘಾತ ವಿಮೆ ನೀಡುವ ಬದಲು ಇದ್ದಾಗ ಆರೋಗ್ಯ ಪರಿಹಾರ ಅಥವಾ ವಿಮೆಗಳನ್ನು ನೀಡಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು  ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಮಾಲತೇಶ್  ಮಾತನಾಡಿ - "ಪ್ರತಿನಿತ್ಯ ಬೆಳಗಿನ ಜಾವ ಎಲ್ಲರೂ ಏಳುವ  ಮುಂಚೆ ನಾವು ಸಮಾಜ ಮತ್ತು ಸರ್ಕಾರ, ರಾಜಕೀಯ ಗಣ್ಯರುಗಳ ಹಾಗೂ ರಾಜ್ಯ, ದೇಶ,ವಿದೇಶದ ಸುದ್ದಿಗಳನ್ನು ಹೊತ್ತು ತಂದು ಮನೆ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇವೆ ನಮ್ಮ ಜೀವನ ಶೋಚನೀಯವಾಗಿದೆ. ಅದೇ ರೀತಿ ನಮ್ಮ ರಾಜ್ಯಾಧ್ಯಕ್ಷ ಶಂಭುಲಿಂಗ ರವರಿಗೆ ಜಿ. ಬಿ ಸಿಂಡ್ರೋಮ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ ಕೂಡಲೆ ಸರ್ಕಾರ ಇತ್ತ  ಪರಿಹಾರ ನೀಡಬೇಕು ಎಂದರು".

ಪತ್ರಿಕ ವಿತರಕ ಸಂಘದ ಗೌರವಾಧ್ಯಕ್ಷ ಹುಲಿಗಿ ಕೃಷ್ಣ  ಮಾತನಾಡಿ, ಕನಿಷ್ಠ ಕಾರ್ಮಿಕ ಇಲಾಖೆ ಸೌಲಭ್ಯನೂ ಸಹ ನಮಗೆ ದೊರೆಯದೆ, ಅನ್ಯಾಯವಾಗಿದ್ದು ಎಲ್ಲಾ ಪತ್ರಿಕ ವಿತರಿಕರಿಗೂ ಆರೋಗ್ಯ ವಿಮೆ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಉಚಿತ ನೆರವಿನ  ರೀತಿಯಲ್ಲಿ ಹೊಸ ಚಿಂತನೆ ಮಾಡಿ ಪತ್ರಿಕ ವಿತರಕರ ಜೀವನ ಸ್ಪೂರ್ತಿಯಾಗಿ ಎಂದರು. 

ಜಯ ಕರ್ನಾಟಕ ಜನಪರ ವೇದಿಕೆ ಶಿಕಾರಿಪುರ  ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿ ಮಾತನಾಡಿ, ಪತ್ರಿಕಾ ವಿತರಕರ ಜೀವನ ಬಹಳಷ್ಟು ಕಷ್ಟದಲ್ಲಿದ್ದು ಸರ್ಕಾರ ವಿಶೇಷವಾದ ಅನುದಾನ ಮತ್ತು ಸೌಲಭ್ಯಗಳನ್ನು ನೀಡುವ ಮುಖಾಂತರ ಇಡೀ ದೇಶಕ್ಕೆ ಮಾದರಿಯಾಗಿ  ಸಮಾಜದ ಹಾಗೂಹೋಗುಗಳ ವಿಷಯ ಮತ್ತು ಸುದ್ದಿಯನ್ನು ತಲುಪಿಸುವ ವಿತರಕರ ಬದುಕು ಕಟ್ಟಿಕೊಳ್ಳಲು ಹೊಸ ಕಾನೂನು ಜಾರಿಗೆ ತಂದ ಸಮಾಜಕ್ಕೆ ಸ್ಪೂರ್ತಿಯಾಗಿ ಎಂದು ಆಗ್ರಹಿಸಿದರು.

 ಪ್ರಧಾನ ಕಾರ್ಯದರ್ಶಿ ನಜೀರ್ ಅಹ್ಮದ್, ಪದಾಧಿಕಾರಿಗಳಾದ ಪರಶುರಾಮ್ ರಾವ್, ಮಲ್ಲಿಕಾರ್ಜುನ್ ಭದ್ರಾವತಿ , ಪಾರ್ಥಿಬನ್, ರಾಮು ಜಿ, ಚಂದ್ರಶೇಖರ್, ಪ್ರತಾಪ್, ಶರತ್, ಧನಂಜಯ್, ಅಜೀ ಉಲ್ಲಾ, ಪ್ರಾಣೇಶ್, ಸಂಗಮೇಶ್ವರ್, ಜಯ ಕರ್ನಾಟಕ ಜನಪರ ವೇದಿಕೆಯ ತಾಲೂಕು  ಕಾರ್ಯದರ್ಶಿ ಇಮ್ರಾನ್, ಕರವೇ ಜನಮನ ರಾಜ್ಯ ಸಂಘಟನೆ  ಪದಾಧಿಕಾರಿಗಳು,

ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ