ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ : ಶಾಸಕರು ಹಾಗೂ ಕೆ ಆರ್ ಐ ಡಿ ಎಲ್ ಅಧ್ಯಕ್ಷರಾದ ಬಿಕೆ ಸಂಗಮೇಶ್ವರ
ಭದ್ರಾವತಿ: ಶಾಸಕರು ಹಾಗೂ ಕೆ ಆರ್ ಐ ಡಿ ಎಲ್ ಅಧ್ಯಕ್ಷರಾದ ಬಿಕೆ ಸಂಗಮೇಶ್ವರ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಬಿ ಎಸ್ ಗಣೇಶ್ ಅವರು, ಗ್ರಾಮಾಂತರ ಅಧ್ಯಕ್ಷರಾದ ಷಡಕ್ಷರಿ ರವರು, ಬಗರ್ ಉಕುಂ ಅಧ್ಯಕ್ಷರಾದ ಮಣಿ ಶೇಖರ್ ರವರು, ಅತ್ತಿಗುಂದ ಧರ್ಮಣ್ಣನವರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರುಗಳು ಜೊತೆಗೂಡಿ ತಾಲ್ಲೂಕಿನ ಹಲವೆಡೆ ಭಾನುವಾರ ಸಂಜೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಕಷ್ಟಗಳಿಗೆ ಸ್ಪಂದಿಸಿದರು.
ಅಧಿಕಾರಿಗಳೊಂದಿಗೆ ಹಾನಿಗೊಳಗಾದ ನಷ್ಟದ ವರದಿ ನೀಡುವಂತೆ ಸೂಚಿಸಿದರು. ಸಚಿವರು ಮತ್ತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದ ನಿಯಮಾವಳಿ ಪ್ರಕಾರ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿ, ರೈತರಿಗೆ ಧೈರ್ಯ ತುಂಬಿದರು.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ