ಪೋಸ್ಟ್‌ಗಳು

ಜೂನ್, 2026 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ರಕ್ತದಾನ ಜೀವದಾನ; ಆರೋಗ್ಯವಂತರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಿ – ಡಾ. ಪೃಥ್ವಿ

ಇಮೇಜ್
  ಶಿವಮೊಗ್ಗ, ಜೂನ್ 30: ಆರೋಗ್ಯವಾಗಿರುವ ಪ್ರತಿಯೊಬ್ಬರೂ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ಮೆಟ್ರೋ ಆಸ್ಪತ್ರೆಯ ತಜ್ಞ ವೈದ್ಯ ಡಾ. ಪೃಥ್ವಿ ಹೇಳಿದರು. ನಗರದ ಹೋಟೆಲ್ ಶುಭಂ ಆವರಣದಲ್ಲಿ ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಕ್ತದಾನವು ಜೀವದಾನದ ಸಮಾನವಾಗಿದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಒಬ್ಬ ದಾನಿ ನೀಡುವ ಒಂದು ಯೂನಿಟ್ ರಕ್ತವು ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಸೇರಿದಂತೆ ಹಲವು ತುರ್ತು ಪರಿಸ್ಥಿತಿಗಳಲ್ಲಿ ಅಮೂಲ್ಯವಾದ ಜೀವಗಳನ್ನು ಉಳಿಸಲು ನೆರವಾಗುತ್ತದೆ ಎಂದು ತಿಳಿಸಿದರು. ಇಂದು ರಕ್ತದಾನ ಮಾಡುತ್ತಿರುವ ಪ್ರತಿಯೊಬ್ಬ ದಾನಿಯೂ ಸಮಾಜಕ್ಕೆ ಮಾದರಿಯಾಗಿದ್ದು, ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಚಳವಳಿಯಲ್ಲಿ ಪಾಲ್ಗೊಳ್ಳಬೇಕು. ರಕ್ತದಾನಿಗಳ ನಿಸ್ವಾರ್ಥ ಸೇವೆ ಅತ್ಯಂತ ಶ್ಲಾಘನೀಯವಾಗಿದ್ದು, ಆರೋಗ್ಯವಂತರಾದ ಎಲ್ಲರೂ ನಿಯಮಿತವಾಗಿ ರಕ್ತದಾನ ಮಾಡುವ ಸಂಕಲ್ಪ ಮಾಡಬೇಕು. ನಮ್ಮ ಒಂದು ಸಣ್ಣ ಸೇವೆ ಮತ್ತೊಬ್ಬರ ಬದುಕಿಗೆ ದೊಡ್ಡ ಆಶಾಕಿರಣವಾಗಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಶಿವಮೊಗ್ಗ ವಿವೇಕ್ ಅಧ್ಯಕ್ಷೆ ವಿಜಯಲಕ್ಷ್ಮಿ ವಹಿಸಿದ್ದರು. ಈ ಸಂದರ್ಭದಲ್ಲಿ ವಲಯ–24ರ ಜೆಡ್‌ವಿಪಿ ಜೆಸಿಐ ಸೆನೆಟರ್ ಗಣೇಶ್ ಪೈ, ಜೆಎಸಿ ಜೆವಿಸಿ ಉದಯ್ ಕಡಂಬ, ಜೆಸಿಐ ನೀಡ್ ಬ್ಲಡ್ ಕಾಲ್ ಕೋ-ಆರ್ಡಿನೇಟರ...

JCI ಶಿವಮೊಗ್ಗ ವಿವೇಕ್‌ನಿಂದ ಇಂದು ಮೆಗಾ ರಕ್ತದಾನ ಶಿಬಿರ

ಇಮೇಜ್
 ಶಿವಮೊಗ್ಗ, ಜೂನ್ 30: ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯು ಇಂದು (ಜೂನ್ 30) ನಗರದ ಹೋಟೆಲ್ ಶುಭಂ ಮುಂಭಾಗದಲ್ಲಿ ಬೃಹತ್ ಮೆಗಾ ರಕ್ತದಾನ ಶಿಬಿರವನ್ನು ಆಯೋಜಿಸಿದೆ. "Be a Hero – Donate Blood, Save Lives" ಎಂಬ ಧ್ಯೇಯವಾಕ್ಯದೊಂದಿಗೆ ನಡೆಯುತ್ತಿರುವ ಈ ಶಿಬಿರವು ಜೀವ ಉಳಿಸುವ ಮಹತ್ವದ ಸಾಮಾಜಿಕ ಸೇವಾ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವಂತೆ ಸಂಘಟಕರು ಮನವಿ ಮಾಡಿದ್ದಾರೆ. ಈ ಶಿಬಿರವನ್ನು ಹೋಟೆಲ್ ಶುಭಂ, ಸ್ಟೈಲ್ ಡ್ಯಾನ್ಸ್ ಸ್ಟುಡಿಯೋ ಹಾಗೂ ಸಂಜೀವಿನಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ಪೃಥ್ವಿ ಭಾಗವಹಿಸಲಿದ್ದು, ಜೆಸಿಐ ಸೇನ್ ಗಣೇಶ್ ಪೈ (ZVP – Region C, Zone 24), ಜೆಎಫ್‌ಎಂ ಶಿಲ್ಪಾ ಸತೀಶ್ (ZC Need Blood – Zone 24) ಹಾಗೂ ಜೆಸಿ ವಿಜಯಲಕ್ಷ್ಮಿ ಕಡಂಬ (ಅಧ್ಯಕ್ಷೆ, JCI ಶಿವಮೊಗ್ಗ ವಿವೇಕ್) ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಪ್ರಾಜೆಕ್ಟ್ ಡೈರೆಕ್ಟರ್ ಜೆಸಿ ಜಯಕುಮಾರ್ ಆಗಿದ್ದು, ರಕ್ತದಾನ ಶಿಬಿರದ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆರೋಗ್ಯವಂತ ವ್ಯಕ್ತಿಯೊಬ್ಬರು ನೀಡುವ ಒಂದು ಯೂನಿಟ್ ರಕ್ತವು ಹಲವರ ಜೀವ ಉಳಿಸಲು ನೆರವಾಗುತ್ತದೆ. ಆದ್ದರಿಂದ ಅರ್ಹ ನಾಗರಿಕರು ಈ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡ...

ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಕಡ್ಡಾಯ

ಇಮೇಜ್
ಶಿವಮೊಗ್ಗ: ಪೋಲಿಯೋ ಹನಿಯನ್ನು ಒಂದರಿಂದ ಐದು ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಲ್ಲಿ ಆಯೋಜಿಸಿದ್ದ ಲಸಿಕಾ ಅಭಿಯಾನದಲ್ಲಿ ಮಾತನಾಡಿ, ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಪೋಲಿಯೋ ಮುಕ್ತ ಭಾರತದ ಅಭಿಯಾನದಲ್ಲಿ ರೋಟರಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು. ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಮಾತನಾಡಿ, ಪೋಲಿಯೋ ಮುಕ್ತ ವಾತಾವರಣ ನಿರ್ಮಿಸುವುದು ಅಗತ್ಯ. ದೇಶದ ಮಕ್ಕಳು ಸದೃಢವಾಗಿ ಆರೋಗ್ಯದಿಂದ ಬೆಳೆಯಲು ಪೋಲಿಯೋ ಹನಿ ಪಡೆಯುವುದು ಅತ್ಯಂತ ಅವಶ್ಯಕ. ಪಾಲಕರು ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದು ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದು, ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿದೆ. ಪಲ್ಸ್ ಪೋಲಿಯೋ ಅಭಿಯಾನದಲ್ಲೂ ರೋಟರಿ ಕೈಜೋಡಿಸಿದೆ ಎಂದು ತಿಳಿಸಿದರು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಿಯೋಜಿತ ಕಾರ್ಯದರ್ಶಿ ಮನೋಹರ್, ವಲಯ ಸೇನಾನಿ ಎ.ಒ.ಮಹೇಶ್, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಪೋಷಕರು ಹಾಜರಿದ್ದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮಾದಕ ವಸ್ತು ವಿರುದ್ಧ ಪೊಲೀಸ್ ಕಾರ್ಯಾಚರಣೆ ತೀವ್ರ; ₹24.55 ಲಕ್ಷ ಮೌಲ್ಯದ 59 ಕೆಜಿ ಗಾಂಜಾ ನಾಶಕ್ಕೆ ಸಿದ್ಧತೆ

ಇಮೇಜ್
 ಶಿವಮೊಗ್ಗ, ಜೂನ್ 27: ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಾದಕ ವಸ್ತುಗಳ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಿದ್ದು, ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ₹24,55,640 ಮೌಲ್ಯದ 59 ಕೆಜಿ 119 ಗ್ರಾಂ ಗಾಂಜಾವನ್ನು ಇಂದು (ಜೂನ್ 27) ನಗರದ ಶುಶ್ರುತ ಬಯೋ-ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿಯ ಕಾಮನ್ ಬಯೋ-ಮೆಡಿಕಲ್ ವೇಸ್ಟ್ ಟ್ರೀಟ್ಮೆಂಟ್ ಮತ್ತು ಡಿಸ್ಪೋಸಲ್ ಘಟಕದಲ್ಲಿ ನಾಶಪಡಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಸುಮಾರು 16 ಕೆಜಿ ಗಾಂಜಾ ನ್ಯಾಯಾಲಯದ ಅನುಮತಿಗಾಗಿ ಬಾಕಿ ಇದೆ ಎಂದು ಹೇಳಿದರು. ಜನವರಿ 1ರಿಂದ ಜೂನ್ 26ರವರೆಗೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, 27 ಗಾಂಜಾ ಸಾಗಣೆ ಪ್ರಕರಣಗಳು, 204 ಗಾಂಜಾ ಸೇವನೆ ಪ್ರಕರಣಗಳು, 374 ಮಂದಿ ಗಾಂಜಾ ಸೇವನೆ ದೃಢಪಟ್ಟ ಪ್ರಕರಣಗಳು, 341 ವಾಹನ ತಪಾಸಣೆ ಕಾರ್ಯಾಚರಣೆಗಳು, 141 ಮಂದಿಯನ್ನು ಕೌನ್ಸೆಲಿಂಗ್‌ಗೆ ಕಳುಹಿಸಿರುವುದು, 660 ಏರಿಯಾ ಡಾಮಿನೇಷನ್ ಕಾರ್ಯಾಚರಣೆಗಳು, 310 ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ಹಾಗೂ 85 ಎನ್‌ಡಿಪಿಎಸ್ ವಾರಂಟ್‌ಗಳ ಜಾರಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸ...

ಜೆಸಿಐ ಶಿವಮೊಗ್ಗ ಸಹ್ಯಾದ್ರಿಯಿಂದ ‘ನಾನು ಒಬ್ಬ ಜ್ಞಾನಿ’ ತರಬೇತಿ ಕಾರ್ಯಕ್ರಮ

ಇಮೇಜ್
  ಶಿವಮೊಗ್ಗ, ಜೂನ್ 25: ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಯುವಜನರು, ಉದ್ಯೋಗಿಗಳು ಹಾಗೂ ಸಾರ್ವಜನಿಕರ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಕೌಶಲ್ಯ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದ “ನಾನು ಒಬ್ಬ ಜ್ಞಾನಿ” ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 26ರಂದು (ಶುಕ್ರವಾರ) ನಗರದ ಖಾಸಗಿ ಹೋಟೆಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವ ತರಬೇತುದಾರರು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಮತ್ತು ಅದರ ಬಳಕೆ, ವ್ಯವಹಾರ ಅಭಿವೃದ್ಧಿಯಲ್ಲಿ ಪ್ರಚಾರ ಮತ್ತು ಸಾರ್ವಜನಿಕ ಸಂಪರ್ಕ (PR) ನಿರ್ವಹಣೆ ಹಾಗೂ ಪರಿಣಾಮಕಾರಿ ಸಾರ್ವಜನಿಕ ಭಾಷಣ (Effective Public Speaking) ಕುರಿತಂತೆ ವಿಶೇಷ ತರಬೇತಿ ನೀಡಲಾಗುತ್ತದೆ. ರಾಷ್ಟ್ರೀಯ ತರಬೇತುದಾರರಾದ ಜೆಸಿ ಕಾರ್ತಿಕ್ ಆರ್. ಸೋನೆಗರ್, ಜೆಸಿ ಕೃಷಾ ಶಾಹಾ ಹಾಗೂ ಜೆಸಿಐ ವಲಯ-24ರ ತರಬೇತುದಾರೆ ಜೆಸಿ ಲಲಿತಾ ಭರತ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಶುಲ್ಕ ರೂ.250 ನಿಗದಿಪಡಿಸಲಾಗಿದ್ದು, ಸೀಮಿತ ಸಂಖ್ಯೆಯ ಆಸನಗಳು ಮಾತ್ರ ಲಭ್ಯವಿವೆ ಎಂದು ಆಯೋಜಕರು ತಿಳಿಸಿದ್ದಾರೆ. ಆಸಕ್ತರು ಜೆಸಿಐ ಮತ್ತು ಯುವ ಜನತೆಗೆ ಪೂರ್ವ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 94497 08967 ಹಾಗೂ 8861...

ಮಾದಕ ವಸ್ತು ವ್ಯಸನ ವಿರೋಧಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ 5 ಕೆ ಮ್ಯಾರಥಾನ್

ಇಮೇಜ್
ಶಿವಮೊಗ್ಗ, ಜೂನ್ 25: ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆಯ ಅಂಗವಾಗಿ ಗುರುವಾರ ಶಿವಮೊಗ್ಗ ನಗರದಲ್ಲಿ 5 ಕಿ.ಮೀ. ಮ್ಯಾರಥಾನ್‌ನ್ನು ಹಮ್ಮಿಕೊಳ್ಳಲಾಯಿತು. ಬೆಳಗ್ಗೆ 6 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಆಯೋಜಿಸಿದ್ದ ಮ್ಯಾರಥಾನ್‌ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹೇಮಂತ್ ಎನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ. ಕಾರಿಯಪ್ಪ ಉಪಸ್ಥಿತರಿದ್ದರು. ಮ್ಯಾರಥಾನ್ ಡಿಎಆರ್ ಪೊಲೀಸ್ ಮೈದಾನದಿಂದ ಆರಂಭವಾಗಿ ಅಶೋಕ ವೃತ್ತ, ಎ.ಎ. ವೃತ್ತ, ಗೋಪಿ ವೃತ್ತ, ಜೈಲ್ ವೃತ್ತ ಹಾಗೂ ಹೆಲಿಪ್ಯಾಡ್ ವೃತ್ತದ ಮಾರ್ಗವಾಗಿ ಸಂಚರಿಸಿ ಮತ್ತೆ ಡಿಎಆರ್ ಮೈದಾನದಲ್ಲಿ ಸಮಾಪ್ತಿಯಾಯಿತು. ಕಾರ್ಯಕ್ರಮದ ಬಳಿಕ ಮ್ಯಾರಥಾನ್‌ನಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಮ್ಯಾರಥಾನ್‌ನಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಣಿಕೆಯನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕೆಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.

ದುರ್ಗಿಗುಡಿ ಸಾರ್ವಜನಿಕ ಶೌಚಾಲಯಕ್ಕೆ ಎರಡು ತಿಂಗಳಿನಿಂದ ಬೀಗ; ಪಾಲಿಕೆ ವಿರುದ್ಧ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ ಎಚ್ಚರಿಕೆ

ಇಮೇಜ್
 ಶಿವಮೊಗ್ಗ, ಜೂನ್ 25: ನಗರದ ದುರ್ಗಿಗುಡಿ ಕೆಂಚಪ್ಪ ಕಾಂಪ್ಲೆಕ್ಸ್ ಹಿಂಭಾಗದಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ಎರಡು ತಿಂಗಳಿನಿಂದ ಬೀಗಮುದ್ರೆ ಹಾಕಲಾಗಿದ್ದು, ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮಸ್ಯೆ ಕುರಿತು ಹಲವಾರು ಬಾರಿ ಮಹಾನಗರ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರತಿ ಬಾರಿ ಒಂದೊಂದು ಕಾರಣ ನೀಡಿ ಕಾಲಹರಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನಗರದ ಪ್ರಮುಖ ವಾಣಿಜ್ಯ ಪ್ರದೇಶದಲ್ಲಿರುವ ಈ ಶೌಚಾಲಯವನ್ನು ನಿತ್ಯ ನೂರಾರು ಜನರು ಬಳಸುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಅದು ಬಂದ್ ಆಗಿರುವುದರಿಂದ ಮಹಿಳೆಯರು, ವೃದ್ಧರು ಹಾಗೂ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಮಹಾನಗರ ಪಾಲಿಕೆಯ ಜವಾಬ್ದಾರಿಯಾಗಿದ್ದು, ಈ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯಗಳಿಗೂ ಬೀಗಮುದ್ರೆ ಬಿದ್ದಿದ್ದು, ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದ್ದು, ಶೌಚಾಲಯಗಳು ತಿಂಗಳುಗಳ ಕಾಲ ಬಂದ್ ಆಗಿದ್ದರೂ ನಿರ್ವಹಣಾ ಬಿಲ್‌ಗಳನ್ನು ಮಾತ್ರ ನಿಯಮಿತವಾಗಿ ಪಾ...

ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಒತ್ತಾಯ : ಮುಖ್ಯಮಂತ್ರಿಗಳಿಗೆ ನಿಯೋಗದಿಂದ ಮನವಿ

ಇಮೇಜ್
 ಶಿವಮೊಗ್ಗ, ಜೂನ್ 24: ಮಲೆನಾಡು ಹಾಗೂ ಮಧ್ಯ ಕರ್ನಾಟಕ ಭಾಗದ ಜನರಿಗೆ ಸುಲಭ ನ್ಯಾಯ ದೊರಕುವ ಉದ್ದೇಶದಿಂದ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ (ಸಂಚಾರಿ ಪೀಠ) ಸ್ಥಾಪಿಸಬೇಕು ಎಂದು ಒತ್ತಾಯಿಸಿ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ವಕೀಲರ ಸಂಘಗಳ ಪ್ರತಿನಿಧಿಗಳ ನಿಯೋಗವು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಇಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಗಳ ಕರ್ತವ್ಯ ನಿರ್ವಹಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ನಿಯೋಗವು, ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿರುವುದನ್ನು ಗಮನಕ್ಕೆ ತಂದಿತು. ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗದ ಜನರು ನ್ಯಾಯಾಂಗ ಸೇವೆಗಾಗಿ ದೂರದ ಪ್ರಯಾಣ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸಂಚಾರಿ ಪೀಠ ಸ್ಥಾಪನೆ ಅಗತ್ಯವಾಗಿದೆ ಎಂದು ನಿಯೋಗ ತಿಳಿಸಿತು. ಅಲ್ಲದೆ, ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವವರೆಗೆ ಜಿಲ್ಲೆಯ ನ್ಯಾಯಾಂಗ ವ್ಯಾಪ್ತಿಯನ್ನು ಬೆಂಗಳೂರು ಪ್ರಧಾನ ಪೀಠದ ಅಧೀನದಲ್ಲಿಯೇ ಮುಂದುವರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು. ನಿಯೋಗದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವ...

ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಪೆನ್ನು ವಿತರಣೆ

ಇಮೇಜ್
  ಶಿವಮೊಗ್ಗ, ಜೂನ್ 24: ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆ ಮಾಡುತ್ತಿರುವ ಸಪ್ತಗಿರಿ ಗ್ರೂಪ್ ಮಾಲೀಕರು ಹಾಗೂ ಕರ್ನಾಟಕ ರಾಜ್ಯ ಉಪ್ಪಾರ ಸಮುದಾಯದ ಮುಖಂಡರಾದ ಆರ್. ವಿಶ್ವನಾಥ್ ಉಪ್ಪಾರ ನಲ್ಲೂರು ಅವರ ಜನ್ಮದಿನದ ಪ್ರಯುಕ್ತ ಕಾಶಿಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ನು ಹಾಗೂ ಸಿಹಿ ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ, ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸಮಾಜದ ಪ್ರತಿಯೊಬ್ಬರೂ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಹಾಲನಾಯಕ್, ಭಗೀರಥ ಸ್ಪೋರ್ಟ್ಸ್ ಅಕಾಡೆಮಿಯ ಅಧ್ಯಕ್ಷರಾದ ಮುರಳಿ ಹೆಚ್. ಸಣ್ಣಕ್ಕಿ, ಕಾರ್ತಿಕ್, ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಮಾಲತೇಶ್, ಕನ್ನಡಪರ ಹೋರಾಟಗಾರ ಜೀವನ್ ಹಾಗೂ ಶಾಲೆಯ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುವ ಮೂಲಕ ಆರ್. ವಿಶ್ವನಾಥ್ ಉಪ್ಪಾರ ನಲ್ಲೂರು ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಉಡುಪಿಯ ಬಳಿಕ ಶಿವಮೊಗ್ಗ ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಇ-ಮೇಲ್; ಒಂದೇ ಜಾಲದ ಕೈವಾಡದ ಶಂಕೆ

ಇಮೇಜ್
  ಶಿವಮೊಗ್ಗ, ಜೂನ್ 24: ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜೂನ್ 22ರಂದು ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದ ಘಟನೆ ಮಾಸುವ ಮುನ್ನವೇ ಇದೀಗ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೂ ಅದೇ ರೀತಿಯ ಬೆದರಿಕೆ ಇ-ಮೇಲ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಎರಡೂ ಘಟನೆಗಳ ನಡುವೆ ಸಾಮ್ಯತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಒಂದೇ ವ್ಯಕ್ತಿ ಅಥವಾ ಸಂಘಟಿತ ಜಾಲದ ಕೈವಾಡ ಇರಬಹುದೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಇ-ಮೇಲ್ ಮೂಲಕ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ನ್ಯಾಯಾಲಯದ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಜಯನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಪೊಲೀಸ್ ಘಟಕಗಳು ಸ್ಥಳಕ್ಕೆ ಧಾವಿಸಿ ತಪಾಸಣೆ ಕಾರ್ಯ ಆರಂಭಿಸಿವೆ. ನ್ಯಾಯಾಲಯದ ಆವರಣ, ಕಟ್ಟಡಗಳು, ವಾಹನ ನಿಲುಗಡೆ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ನ್ಯಾಯಾಲಯಕ್ಕೆ ಆಗಮಿಸುವ ವಾಹನಗಳ ತಪಾಸಣೆಯನ್ನೂ ಕಟ್ಟುನಿಟ್ಟಾಗಿ ಕೈಗೊಳ್ಳಲಾಗಿದೆ. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿಯನ್ನೂ ಎಚ್ಚರಿಕೆಯಲ್ಲಿರಿಸಲಾಗಿದೆ. ಜೂನ್ 22ರಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೂ ಇದೇ ರೀತಿಯ ಬೆದರಿಕೆ ಇ-ಮೇಲ್ ಬಂದಿತ್ತು. ಆಗ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ...

ಬಾಂಬ್ ಬೆದರಿಕೆ ಹಿನ್ನೆಲೆ ನ್ಯಾಯಾಲಯ ಆವರಣದಲ್ಲಿ ಪೊಲೀಸ್ ಕಟ್ಟೆಚ್ಚರ

ಇಮೇಜ್
ಶಿವಮೊಗ್ಗ, ಜೂನ್ 24: ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೀಡಿದ ಮಾಹಿತಿಯ ಪ್ರಕಾರ, ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ. ನ್ಯಾಯಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದು, ವಾಹನಗಳ ತಪಾಸಣೆಯನ್ನೂ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸುವ ವಕೀಲರು, ಕಕ್ಷೀದಾರರು ಹಾಗೂ ಸಾರ್ವಜನಿಕರು ಪೊಲೀಸ್ ಇಲಾಖೆಯ ಭದ್ರತಾ ಕ್ರಮಗಳಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಶಿವಮೊಗ್ಗ ವಕೀಲರ ಸಂಘದ ಕಾರ್ಯಕಾರಿ ಮಂಡಳಿಯ ಪರವಾಗಿ ಪ್ರಕಟಣೆ ನೀಡಿರುವ ನಿರ್ದೇಶಕರು, ಭದ್ರತಾ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಎಲ್ಲರೂ ಸಹನೆ ಮತ್ತು ಸಹಕಾರ ನೀಡುವಂತೆ ಕೋರಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಬೆದರಿಕೆ ಇ-ಮೇಲ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಸ...

ಶಿವಮೊಗ್ಗದಲ್ಲಿ ಪ್ರಾಯೋಗಿಕ ಪೀಠ ಸ್ಥಾಪನೆಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

ಇಮೇಜ್
 ಶಿವಮೊಗ್ಗ, ಜೂನ್ 23: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ.  ರಾಘವೇಂದ್ರ ಅವರು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.  ಲೋಕ ಭವನದಲ್ಲಿ ನಡೆದ ಭೇಟಿಯ ವೇಳೆ, ಶಿವಮೊಗ್ಗವು ಭೌಗೋಳಿಕವಾಗಿ ಅನುಕೂಲಕರವಾದ ಆಡಳಿತದ ಜೊತೆಗೆ ಮಧ್ಯ ಕರ್ನಾಟಕದ ಪ್ರಮುಖ,  ಶೈಕ್ಷಣಿಕ, ವಾಣಿಜ್ಯ ಮತ್ತು ಸಾರಿಗೆಯಾಗಿ ಬೆಳೆಯುತ್ತಿರುವ ಇಲ್ಲಿ ಅಧಿಕೃತ ಕೇಂದ್ರ ಪೀಠ ಸ್ಥಾಪನೆಯಾಗಿದೆ  ಎಂದು ಸಂಸದರು ರಾಜ್ಯಪಾಲರ ಗಮನ ಸೆಳೆದರು.  ಶಿವಮೊಗ್ಗದಲ್ಲಿ ಪ್ರದರ್ಶನ ಪೀಠ ಸ್ಥಾಪನೆಯಾದರೆ ಶಿವಮೊಗ್ಗ ಜಿಲ್ಲೆಯಷ್ಟೇ ಅಲ್ಲದೆ, ಚಿಕ್ಕಮಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಜನರಿಗೆ ಸಹ ನ್ಯಾಯ ಸೇವೆ  ಸುಲಭವಾಗಿ ಲಭ್ಯ.  ಇದರಿಂದ ನ್ಯಾಯಾಲಯಗಳಿಗೆ ತೆರಳುವ ವೆಚ್ಚ ಹಾಗೂ ಸಮಯ ಕಡಿಮೆಯಾಗಲಿದೆ, ನ್ಯಾಯಪ್ರಾಪ್ತಿ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದು ಅವರು ಹೇಳಿದರು  ಪ್ರತಿಪಾದಿಸಿದರು.  ಭೇಟಿಯ ವೇಳೆ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಉಪಸ್ಥಿತರಿದ್ದು, ಶಿವಮೊಗ್ಗದಲ್ಲಿ ಶಾಲಾ ಪೀಠ ಸ್ಥಾಪನೆ  ತಮ್ಮ ಬೆಂಬಲ.   ಬೆಂಗಳೂರು ನ್ಯಾಯವ್ಯಾಪ್ತಿಯಲ್ಲೇ ಶಿವಮೊಗ್ಗ ಮುಂದುವರಿಯಲಿ  ಶಿವಮೊಗ್ಗದಲ್ಲಿ ಪ್ರತ್ಯೇಕ ಪೀಠ ಸ್ಥಾಪನೆಯಾಗುವವರೆಗೆ ಹೈಕೋರ್ಟ್  ಕರ್ನಾಟಕ ಪ್ರಧಾನ ಪೀಠದ ನ್ಯಾಯವ್ಯಾಪ್ತಿಯ...

ರಾಜ್ಯದಲ್ಲಿ ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಅನುಮತಿ ನೀಡದಂತೆ ಮನವಿ

ಇಮೇಜ್
  ಚನ್ನಗಿರಿ, ಜೂನ್ 22: ರಾಜ್ಯದಲ್ಲಿ ವಿದ್ಯುತ್ ವಿತರಣೆಗೆ ಖಾಸಗಿ ಸಂಸ್ಥೆಯಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕೋಡಿಹಳ್ಳಿ ಚಂದ್ರಶೇಖರ್ ಬಣದ ಚನ್ನಗಿರಿ ತಾಲ್ಲೂಕು ಸಮಿತಿಯು ಮನವಿ ಸಲ್ಲಿಸಿದೆ. ಸಂಘದ ಅಧ್ಯಕ್ಷ ಬಸವಾಪುರ ರಂಗನಾಥ್ ಹಾಗೂ ಇತರ ಪದಾಧಿಕಾರಿಗಳು ಸಲ್ಲಿಸಿರುವ ಮನವಿಯಲ್ಲಿ, ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದಲ್ಲಿ ವಿದ್ಯುತ್ ವಿತರಣೆಗೆ ಅನುಮತಿ ಕೋರಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿರುವುದು ತಿಳಿದುಬಂದಿದೆ. ಈ ಅರ್ಜಿಗೆ ಅನುಮತಿ ನೀಡಿದಲ್ಲಿ ರಾಜ್ಯದ ವಿದ್ಯುತ್ ಸರಬರಾಜು ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಸಾರ್ವಜನಿಕರು, ರೈತರು ಹಾಗೂ ಕೈಗಾರಿಕೋದ್ಯಮಿಗಳಿಗೆ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಆದ್ದರಿಂದ, ವಿದ್ಯುತ್ ಕಾಯ್ದೆ–2003ರ ಕಲಂ 108ರ ಅಡಿಯಲ್ಲಿ ಟಾಟಾ ಪವರ್ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಿ, ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿದ್ಯುತ್ ವಿತರಣಾ ಸಂಸ್ಥೆಗಳ ಮೂಲಕವೇ ವಿದ್ಯುತ್ ಸರಬರಾಜು ಮುಂದುವರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂಬಂಧ ಸಲ್ಲಿಕೆಯಾಗಿರುವ ಮೂಲ ಮನವಿಯನ್ನು ಮುಂದಿನ ಅಗತ್ಯ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಚನ್ನಗಿರಿ ತಹಶೀಲ್ದಾರ್ ಕಚೇರಿಯಿಂದ ರವಾನಿಸಲಾಗಿದೆ ಎಂದು ತಿಳಿ...

ಕನಕಪುರದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಶ್ರೀಮತಿ ರಾಧಾ ನಿಧನ: ನ್ಯಾಯಾಂಗ ಕ್ಷೇತ್ರಕ್ಕೆ ಅಪಾರ ನಷ್ಟ

ಇಮೇಜ್
  ರಾಮನಗರ ಜಿಲ್ಲೆ ಕನಕಪುರದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿದ್ದ ಶ್ರೀಮತಿ ರಾಧಾ ಎಸ್. ಅವರ ನಿಧನದ ಸುದ್ದಿ ಕಾನೂನು ವಲಯ, ವಕೀಲ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ತೀವ್ರ ದುಃಖ ಮೂಡಿಸಿದೆ. ನ್ಯಾಯನಿಷ್ಠೆ, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದ್ದ ಅವರು ನ್ಯಾಯಾಂಗ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.  ಕನಕಪುರ ನ್ಯಾಯಾಲಯದಲ್ಲಿ ಹಲವು ಮಹತ್ವದ ನಾಗರಿಕ ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಸಮರ್ಥವಾಗಿ ನಡೆಸಿದ್ದ ಶ್ರೀಮತಿ ರಾಧಾ ಅವರು, ನ್ಯಾಯಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರುವ ಸಾಮಾನ್ಯ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅವರ ಸರಳತೆ, ಕರ್ತವ್ಯಪ್ರಜ್ಞೆ ಹಾಗೂ ನ್ಯಾಯದ ಮೌಲ್ಯಗಳ ಮೇಲಿನ ಬದ್ಧತೆಯನ್ನು ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಸ್ಮರಿಸುತ್ತಿದ್ದಾರೆ.  ಅವರ ಅಕಾಲಿಕ ಅಗಲಿಕೆ ನ್ಯಾಯಾಂಗ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ನ್ಯಾಯವನ್ನು ಕೇವಲ ಕಾನೂನಿನ ಚೌಕಟ್ಟಿನಲ್ಲಷ್ಟೇ ಅಲ್ಲದೆ ಮಾನವೀಯ ದೃಷ್ಟಿಕೋನದಿಂದಲೂ ಪರಿಗಣಿಸುತ್ತಿದ್ದ ನ್ಯಾಯಾಧೀಶೆಯಾಗಿ ಅವರು ಗುರುತಿಸಿಕೊಂಡಿದ್ದರು ಎಂದು ಸಹೋದ್ಯೋಗಿಗಳು ಅಭಿಪ್ರಾಯಪಟ್ಟಿದ್ದಾರೆ. ಶ್ರೀಮತಿ ರಾಧಾ ಅವರ ನಿಧನಕ್ಕೆ ವಿವಿಧ ಸಂಘಟನೆಗಳು, ವಕೀಲರ ಸಂಘಗಳು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿ...

ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ವಿಡಿಯೋ ಪ್ರಕರಣ ಭೇದಿಸಿದ ಸೈಬರ್ ಪೊಲೀಸರು: ಮೂವರು ಹೈಟೆಕ್ ಪದವೀಧರರ ಬಂಧನ

ಇಮೇಜ್
ಬೆಂಗಳೂರು, ಜೂನ್ 21: ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಡೀಪ್‌ಫೇಕ್ ಅಶ್ಲೀಲ ವಿಡಿಯೋ ಪ್ರಕರಣವನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಭೇದಿಸಿದ್ದು, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೋ ಹಾಗೂ ಚಿತ್ರಗಳನ್ನು ಸೃಷ್ಟಿಸಿ ಹರಡಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಉನ್ನತ ಶಿಕ್ಷಣ ಪಡೆದಿದ್ದು, ವಿವಿಧ ವೃತ್ತಿಪರ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ಬಂಧಿತರನ್ನು ಬೆಂಗಳೂರಿನ ನಾಗಸಂದ್ರದ ರಂಜಿತ್ (25), ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಚಂದ್ರಕಾಂತ್ (33) ಹಾಗೂ ಬಾಗಲಕೋಟೆ ಜಿಲ್ಲೆಯ ರವಿ ಕುಮಾರ್ (24) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ರಂಜಿತ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಎಐ ಆಧಾರಿತ ತಂತ್ರಜ್ಞಾನ ಬಳಸಿ ನಟಿಯ ಮುಖವನ್ನು ಆಕ್ಷೇಪಾರ್ಹ ವಿಡಿಯೋಗಳಿಗೆ ಜೋಡಿಸಿ ಡೀಪ್‌ಫೇಕ್ ವಿಷಯಗಳನ್ನು ಸೃಷ್ಟಿಸುತ್ತಿದ್ದ. ಚಂದ್ರಕಾಂತ್ ಖಾಸಗಿ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರೆ, ರವಿ ಕುಮಾರ್ ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಿಡಿಯೋಗಳನ್ನು ವೈರಲ್ ಮಾಡಿ ವೀಕ್ಷಣೆ ಹಾಗೂ ಆದಾಯ ಗಳಿಸಲು ಪ್ರಯತ್ನಿಸಿದ್ದ ಎಂದು ತಿಳಿದುಬಂದಿದೆ. ಕಳೆದ ತಿಂಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಆಕ್ಷೇಪಾರ...

ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದ ಶಿವಮೊಗ್ಗದ ಯುವ ಸಂಶೋಧಕ ಸಚಿನ್ ಎನ್.ಜೆ

ಇಮೇಜ್
  ಶಿವಮೊಗ್ಗ, ಜೂನ್ 21: ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಚಿನ್ ಎನ್.ಜೆ ಅವರಿಗೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಘೋಷಿಸಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, "ಅಭಿವೃದ್ಧಿ ಸಂವಹನದ ಮಾಧ್ಯಮವಾಗಿ ಚಲನಚಿತ್ರ: ಆಯ್ದ ಕನ್ನಡ ಚಲನಚಿತ್ರಗಳ ಒಂದು ವಿಶ್ಲೇಷಣಾತ್ಮಕ ಅಧ್ಯಯನ" ಎಂಬ ವಿಷಯದ ಕುರಿತು ಸಚಿನ್ ಅವರು ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿದ್ದರು. ಅವರ ಸಂಶೋಧನಾ ಕಾರ್ಯವು ಕನ್ನಡ ಚಲನಚಿತ್ರಗಳು ಅಭಿವೃದ್ಧಿ ಸಂವಹನದಲ್ಲಿ ವಹಿಸುವ ಪಾತ್ರ ಮತ್ತು ಸಾಮಾಜಿಕ ಬದಲಾವಣೆಯ ಮೇಲೆ ಅವುಗಳ ಪ್ರಭಾವವನ್ನು ವಿಶ್ಲೇಷಿಸುವ ಮಹತ್ವದ ಅಧ್ಯಯನವಾಗಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ನೆಗವಾಡಿ ಗ್ರಾಮದವರಾದ ಸಚಿನ್ ಎನ್.ಜೆ ಅವರು ಜಯಪ್ಪ ಹಾಗೂ ಸುಜಾತ ದಂಪತಿಯ ಪುತ್ರರಾಗಿದ್ದಾರೆ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ರಿಪ್ಪನ್‌ಪೇಟೆ ಸಮೀಪದ ಚಂದಳ್ಳಿಯಲ್ಲಿ ಪೂರ್ಣಗೊಳಿಸಿದ ಅವರು, ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ರಿಪ್ಪನ್‌ಪೇಟೆಯಲ್ಲಿಯೇ ಮುಗಿಸಿ ಉನ್ನತ ಶಿಕ್ಷಣದತ್ತ ಹೆಜ್ಜೆ ಹಾಕಿದ್ದರು. ಬಳಿಕ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದ ಅವರು, ಸಂಶೋಧನಾ ಕ್ಷೇತ್ರದಲ್ಲಿ ನಿರಂತರ ಆಸಕ್ತಿ ತೋರಿಸಿ ಇದೀಗ ಪಿಎಚ್.ಡಿ ...

ಮಾನವೀಯತೆಯ ಪ್ರತಿಬಿಂಬವಾಗಿ ಜಯನಗರ ಪೊಲೀಸ್ ಠಾಣೆ – ರಕ್ತದಾನದ ಮೂಲಕ ಜೀವ ಉಳಿಸುವ ಮಹತ್ಕಾರ್ಯ

ಇಮೇಜ್
 ಶಿವಮೊಗ್ಗ: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆ ಹೊತ್ತಿರುವ ಪೊಲೀಸ್ ಇಲಾಖೆಯು ಇಂದು ಮತ್ತೊಮ್ಮೆ ತನ್ನ ಮಾನವೀಯ ಮುಖವನ್ನು ಅನಾವರಣಗೊಳಿಸಿದೆ. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕ ರವಿ ಪಾಟೀಲ್ ಅವರ ನೇತೃತ್ವದಲ್ಲಿ ಹಾಗೂ ಟ್ರಾಫಿಕ್ ಸಿಬ್ಬಂದಿ ಹಾಲೇಶ್ ಅವರ ಮುಂದಾಳತ್ವದಲ್ಲಿ ಆಶಾಜ್ಯೋತಿ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ರಕ್ತದಾನ ಎಂಬುದು ಕೇವಲ ಒಂದು ಸೇವೆಯಲ್ಲ, ಅದು ಅಪರಿಚಿತ ಜೀವಕ್ಕೆ ಬದುಕಿನ ಹೊಸ ಆಶಾಕಿರಣ ನೀಡುವ ಮಹಾದಾನವಾಗಿದೆ. ಅಪಘಾತಗಳು, ತುರ್ತು ಶಸ್ತ್ರಚಿಕಿತ್ಸೆಗಳು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತದ ಅವಶ್ಯಕತೆ ಎದುರಾಗುವ ಸಂದರ್ಭದಲ್ಲಿ ಇಂತಹ ಶಿಬಿರಗಳು ಹಲವರ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಕರ್ತವ್ಯದ ಒತ್ತಡಗಳ ನಡುವೆಯೂ ಜಯನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜದ ಮೇಲಿನ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು. ಸಾಮಾನ್ಯವಾಗಿ ಪೊಲೀಸ್ ಇಲಾಖೆಯನ್ನು ಕಠಿಣ ಶಿಸ್ತಿನ ಪ್ರತೀಕವಾಗಿ ನೋಡುವ ಜನರಿಗೆ, ಈ ಕಾರ್ಯವು ಅವರ ಹೃದಯದಲ್ಲಿರುವ ಕರುಣೆ, ಪ್ರೀತಿ ಮತ್ತು ಮಾನವೀಯತೆಯ ಪ್ರತಿಬಿಂಬವಾಗಿ ಕಾಣಿಸಿತು. ಒಬ್ಬ ವ್ಯಕ್ತಿಯ ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಬಹುದು ಎನ್ನುವ ಮಾತಿಗೆ ಅರ್ಥ ತುಂಬುವಂತೆ ಪೊಲೀಸ್ ಸಿಬ್ಬಂದಿಗಳು ತ...

ಪ್ರಪಂಚಾದ್ಯಂತ ರೋಟರಿ ಸೇವೆ ಜನಮನ ತಲುಪುತ್ತಿದೆ : ಪಾಲಾಕ್ಷ ಕೆ. ರೋಟರಿ ಜಿಲ್ಲಾ ಗವರ್ನರ್

ಇಮೇಜ್
ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ ವಿಶೇಷವಾದ ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುತ್ತಾ ಎಲ್ಲಾ ಜನಮಾನಸವನ್ನು ತಲುಪುತ್ತಿರುವ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ. ಎಂದು ರೋಟರಿ ಜಿಲ್ಲೆ 31 82ರ ಎಲ್ಲಾ ಗವರ್ನರ್ ಪಾಲಾಕ್ಷ ಕೆ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ನಗರದ ವಿಶಾಲ್ ಮಾರ್ಟ್ ಎದುರುಗಡೆ ಇರುವ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ಲಿನ  ನವೀಕೃತ ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ. 2026 27ನೇ ಸಾಲಿನ ಜಿಲ್ಲಾ ಗೌರ್ನರ್ ಬಿ ಎಂ ಬಟ್ ಮಾತನಾಡುತ್ತಾ ಇಂದು ರೋಟರಿ ಸಂಸ್ಥೆಗಳ ಮುಖಾಂತರ ಹಲವಾರು ಯೋಜನೆಗಳನ್ನ ಹಮ್ಮಿಕೊಳ್ಳುವುದರ ಜೊತೆಗೆ ಪ್ರೀತಿ ಸ್ನೇಹ ಒಡನಾಟ ಹಾಗೂ ಉತ್ತಮ ಬಾಂಧವ್ಯ ವೃದ್ಧಿ ಮಾಡಲು ಸಹಕಾರಿಯಾಗಿದೆ ಇಂತಹ ಸುಸಜ್ಜಿತವಾದ ಕಟ್ಟಡದಲ್ಲಿ ಬುದ್ಧಿ ಮಂದಿರ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು ಮತ್ತೋರ್ವ ಚುನಾಯಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರವರು ಮಾತನಾಡುತ್ತಾ ರೋಟೋರಿಯ ಸೇವಾ ಕಾರ್ಯಗಳನ್ನು ಕಾರ್ಯಗಳನ್ನು ಅಂತರಾಷ್ಟ್ರೀಯ ರೋಟರಿ ಅಧ್ಯಕ್ಷರ ಆಶಯದಂತೆ ಸತ್ಕಾರ್ಯಗಳನ್ನು  ಮಾಡಲು  ಎಲ್ಲಾ ಸದಸ್ಯರು ಒಟ್ಟುಗೂಡಿ ಸಮಾಜದ ಅಭಿವೃದ್ಧಿಗೆ ಪೂರಕವಾದಂತ ಯೋಜನೆಗಳನ್ನು ಹಮ್ಮಿ ಹಮ್ಮಿಕೊಂಡು ಈ ಸ್ಥಳವನ್ನು ಮುಂದಿನ ದಿನಗಳಲ್ಲಿ ಅಭಿವೃದ್ದಿ ಪಡಿಸುವಂತೆ ಕ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ – ಸಾಧಕರಿಗೆ ಸನ್ಮಾನ

ಇಮೇಜ್
  ಶಿವಮೊಗ್ಗ: ಕಲಾವಿದ ಚಾರಿಟೇಬಲ್ ಪಬ್ಲಿಕ್ ಟ್ರಸ್ಟ್‌ನ 22ನೇ ವರ್ಷದ ಸೇವಾ ಕಾರ್ಯದ ಅಂಗವಾಗಿ ಸರ್ಕಾರಿ ಶಾಲೆಗಳ 6, 7 ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಮಾಜಿ ಸಂಸದರಾದ ಆಯನೂರು ಮಂಜುನಾಥ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಿಕ್ಷಣವು ಸಮಾಜದ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವ ಮೂಲಕ ಅವರ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗುವ ಇಂತಹ ಸಮಾಜಮುಖಿ ಕಾರ್ಯಗಳು ಶ್ಲಾಘನೀಯವೆಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಿ.ಎಸ್. ಅರುಣ್, ಕಲಗೋಡು ರತ್ನಾಕರ್, ಎಂ. ಗುರುಮೂರ್ತಿ, ಸತೀಶ್ ಎಸ್.ಡಿ., ಚಿರಂಜೀವಿ ಬಾಬು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಶುಭ ನಡೆಸಿಕೊಟ್ಟರು. ಟ್ರಸ್ಟ್‌ನ ಅಧ್ಯಕ್ಷರಾದ ಕಲಾವಿದ ಅವರು ಸಮಾಜದ ಶಿಕ್ಷಣ ಮತ್ತು ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ ಕೈಗೊಳ್ಳುತ್ತಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ, ಮುಂದೆಯೂ ಇಂತಹ ಸೇವಾ ಚಟುವಟಿಕೆಗಳನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,...

ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಕನ್ನಡ ಕದಂಬ ವೇದಿಕೆ ಮನವಿ: ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಒತ್ತಾಯ

ಇಮೇಜ್
  ಶಿವಮೊಗ್ಗ, ಜೂನ್ 19: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪ್ರವೇಶವನ್ನು ವಿರೋಧಿಸಿ, "ಮುಂಬೈ ಟಾಟಾ ಪವರ್ ಕಂಪನಿ ಲಿಮಿಟೆಡ್"ಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಬೆಸ್ಕಾಂ, ಜೆಸ್ಕಾಂ, ಹೆಸ್ಕಾಂ, ಮೆಸ್ಕಾಂ ಸೇರಿದಂತೆ ರಾಜ್ಯ ಸರ್ಕಾರದ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯ 19 ಜಿಲ್ಲೆಗಳಲ್ಲಿ ಸಮಾನಾಂತರವಾಗಿ ವಿದ್ಯುತ್ ವಿತರಣೆ ನಡೆಸಲು ಮುಂಬೈ ಮೂಲದ ಬಾಬಾ ಪವರ್ ಕಂಪನಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ವಿರೋಧ ವ್ಯಕ್ತವಾಗಿದೆ. ಈ ಕುರಿತು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಮನವಿಯಲ್ಲಿ, ರಾಜ್ಯ ಸರ್ಕಾರವು ಇದುವರೆಗೆ ಗ್ರಾಮೀಣ ವಿದ್ಯುದೀಕರಣ, ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್, ಭಾಗ್ಯಜ್ಯೋತಿ, ಕುಟೀರಜ್ಯೋತಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಲಾಭ-ನಷ್ಟದ ಲೆಕ್ಕಾಚಾರವಿಲ್ಲದೆ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಉಲ್ಲೇಖಿಸಲಾಗಿದೆ. ಇಂತಹ ಸಾರ್ವಜನಿಕ ಸೇವಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವುದರಿಂದ ಸರ್ಕಾರದ ನಿಯಂತ್ರಣ ಕಡಿಮೆಯಾಗುವ ಜೊತೆಗೆ ಗ್ರಾಹಕರ ನಡುವೆ ಅಸಮಾನತೆ...

ಸರ್ಕಾರಿ ನೌಕರರು ಬಿಡುವಿನ ವೇಳೆಯನ್ನು ಸದುಪಯೋಗಪಡಿಸಿಕೊಳ್ಳಬೇಕು: ಕೋಗಲೂರು ತಿಪ್ಪೇಸ್ವಾಮಿ

ಇಮೇಜ್
  ಶಿವಮೊಗ್ಗ, ಜೂ.17: ಸರ್ಕಾರಿ ನೌಕರರು ತಮ್ಮ ಕರ್ತವ್ಯದ ಅವಧಿಯ ನಂತರದ ಸಮಯ ಹಾಗೂ ರಜಾದಿನಗಳನ್ನು ಸದುಪಯೋಗಪಡಿಸಿಕೊಂಡು ತಮ್ಮಲ್ಲಿರುವ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕಲಾತ್ಮಕ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು. ನಗರದ ಮಥುರ ಪ್ಯಾರಡೈಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಭೆ ಹಾಗೂ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ನೌಕರರಲ್ಲಿರುವ ವಿವಿಧ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಪರಿಷತ್ತು ಕಾರ್ಯನಿರ್ವಹಿಸುತ್ತಿದ್ದು, ನೌಕರರು ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯ, ಸಂಗೀತ, ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಪರಿಷತ್ತಿನ ಪದಾಧಿಕಾರಿಗಳು ಹಾಗೂ 15ಕ್ಕೂ ಹೆಚ್ಚು ಕವಿಗಳು ಭಾಗವಹಿಸಿ ತಮ್ಮ ಕವನಗಳನ್ನು ವಾಚಿಸಿದರು. ಗೌರವಾಧ್ಯಕ್ಷ ಜಿ. ಕ್ರೊಟ್ರಪ್ಪ ಉಪಸ್ಥಿತರಿದ್ದರು. ರಾಜ್ಯ ಸಮಿತಿಯ ಸಹ ಕಾರ್ಯದರ್ಶಿ ಶಿವಾನಾಯಕ ಅವರು ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಜಿಲ್ಲಾ ಕಾರ್ಯಾಧ...

ಸರ್ಕಾರಿ ಪ್ರೌಢಶಾಲೆ ನಿಧಿಗೆಯಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ: ವಿದ್ಯಾರ್ಥಿಗಳಲ್ಲಿ ವಿಜ್ಞಾನಾಸಕ್ತಿ ಹೆಚ್ಚಿಸಿದ ಪ್ರಾಯೋಗಿಕ ಪ್ರದರ್ಶನ

ಇಮೇಜ್
  ಶಿವಮೊಗ್ಗ, ಜೂನ್ 17: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ರಾಷ್ಟ್ರೀಯ ವಿಜ್ಞಾನ ವಸ್ತು ಸಂಗ್ರಹಾಲಯಗಳ ಪರಿಷತ್), ಸಂಸ್ಕೃತಿ ಸಚಿವಾಲಯ, ಭಾರತ ಸರ್ಕಾರದ ವತಿಯಿಂದ ನಗರದ ಸರ್ಕಾರಿ ಪ್ರೌಢಶಾಲೆ ನಿಧಿಗೆಯಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಸಂಚಾರಿ ವಿಜ್ಞಾನ ಪ್ರದರ್ಶನ ಆಯೋಜಿಸಲಾಯಿತು. ಪ್ರದರ್ಶನದಲ್ಲಿ ನೇರ ವಿದ್ಯುತ್ ಮತ್ತು ಪರ್ಯಾಯ ವಿದ್ಯುತ್, ಆಯಸ್ಕಾಂತ ಗುರುತಿಸುವಿಕೆ, ಸೇತುವೆ ಸಮತೋಲನ, ಆಸ್ಟೆರ್ಡ್ ಪ್ರಯೋಗ, ಆಯಸ್ಕಾಂತದ ಗುಣಗಳು, ಧಾರಕಗಳ ಸರಣಿ ಹಾಗೂ ಸಮಾನಾಂತರ ಜೋಡಣೆ, ಫ್ಲೆಮಿಂಗ್ ಎಡಗೈ ನಿಯಮ, ನೇರ ವಿದ್ಯುತ್ ಮೋಟಾರ್, ಓಮ್ ನಿಯಮ, ವಾಹಕಗಳು ಮತ್ತು ಅವಾಹಕಗಳು, ಫ್ಯಾರಡೆ ಪ್ರಯೋಗ, ಕಾಂತಿಯ ವಿದ್ಯುತ್ ಪ್ರೇರಣೆ, ವಿದ್ಯುತ್ ಜನಕ, ಬಲ್ಪಿನ ವಿಧಗಳು ಸೇರಿದಂತೆ ಭೌತಶಾಸ್ತ್ರ ಹಾಗೂ ಎಲೆಕ್ಟ್ರಾನಿಕ್ಸ್‌ಗೆ ಸಂಬಂಧಿಸಿದ ಹಲವು ವಿಷಯಗಳನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಯಿತು. ಹಿರಿಯ ಶಿಕ್ಷಣ ಅಧಿಕಾರಿಯಾದ ಎಂ.ಎಸ್. ಮುತ್ತುರಾಜ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ವಿವಿಧ ವಿಜ್ಞಾನ ಪ್ರಯೋಗಗಳ ನೇರ ಪ್ರದರ್ಶನ ನೀಡಿ, ಅವುಗಳ ಕಾರ್ಯವಿಧಾನ ಮತ್ತು ವೈಜ್ಞಾನಿಕ ತತ್ವಗಳನ್ನು ಸರಳವಾಗಿ ವಿವರಿಸಿದರು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ವಿಜ್ಞಾನದ ವಿವಿಧ ಅಂಶಗಳ ಬಗ್ಗೆ ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಬಿ. ಲಕ್ಷ್ಮಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಕೆ. ಮಂಜುನಾ...

ಜೆಎನ್‌ಸಿಸಿ ಕಾಲೇಜು ವಿದ್ಯಾರ್ಥಿಗಳ ಕಾರು ಅಪಘಾತ: ಪಾದಚಾರಿ ಮಹಿಳೆಯ ಕಾಲು ಮುರಿತ

ಇಮೇಜ್
  ಶಿವಮೊಗ್ಗ, ಜೂ.17: ನಗರದ ವಿನಾಯಕನಗರದಲ್ಲಿರುವ ರೋಟರಿ ರಕ್ತನಿಧಿಯ ಎದುರು ಬುಧವಾರ ಸಂಭವಿಸಿದ ಕಾರು ಅಪಘಾತದಲ್ಲಿ ಪಾದಚಾರಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಅವರ ಕಾಲು ಮುರಿದಿರುವ ಘಟನೆ ನಡೆದಿದೆ. ಚೇವರ್ಲೆಟ್ ಕಂಪನಿಯ ಕಾರು ಚಾಲನೆ ಮಾಡುತ್ತಿದ್ದ ಜೆಎನ್‌ಸಿಸಿ ಕಾಲೇಜಿನ ವಿದ್ಯಾರ್ಥಿಗಳು ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಪಕ್ಕದ ಪಾದಚಾರಿ ರಸ್ತೆಗೆ ಡಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆ ಕುರಿತು ಚಂದ್ರೋದಯ ಪತ್ರಿಕೆಯೊಂದಿಗೆ ಮಾತನಾಡಿದ ವಿದ್ಯಾರ್ಥಿಗಳು, "ಕಾರು ಟೈಯರ್ ಏಕಾಏಕಿ ಬ್ಲಾಸ್ಟ್ ಆದ ಕಾರಣ ವಾಹನದ ಮೇಲಿನ ನಿಯಂತ್ರಣ ತಪ್ಪಿತು. ಅಪಘಾತ ತಪ್ಪಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಾವು ಟ್ಯಾಂಕ್ ಮೊಹಲ್ಲಾಕ್ಕೆ ಲ್ಯಾಪ್‌ಟಾಪ್ ತರಲು ಹೋಗುತ್ತಿದ್ದೆವು" ಎಂದು ತಿಳಿಸಿದ್ದಾರೆ. ಕಾರಿನಲ್ಲಿ ಹರ್ಷ ಹಾಗೂ ಅವರ ಸ್ನೇಹಿತರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಮಹಿಳೆಯ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು, ಟೈಯರ್ ಬ್ಲಾಸ್ಟ್‌ನಿಂದಲೇ ಘಟನೆ ಸಂಭವಿಸಿತ...

ಪತ್ರಿಕಾ ವಿತರಕರಿಗೆ ಜರ್ಕಿನ್, ಶಾಲಾ ಮಕ್ಕಳಿಗೆ ಬ್ಯಾಗ್ ಉಚಿತ ವಿತರಣೆ

ಇಮೇಜ್
 ಶಿವಮೊಗ್ಗ: ನಗರದ ನೆಹರು ರಸ್ತೆಯಲ್ಲಿರುವ ಸಮರ್ಥ ಎಂಟರ್‌ಪ್ರೈಸಸ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಶಿವಮೊಗ್ಗ ಜಿಲ್ಲಾ ಘಟಕದ ಪತ್ರಿಕಾ ವಿತರಕರಿಗೆ ಉಚಿತ ಜರ್ಕಿನ್‌ಗಳನ್ನು ಹಾಗೂ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರ ಸೇವೆಯನ್ನು ಸ್ಮರಿಸಿ ಅವರನ್ನು ಗೌರವಿಸುವ ಉದ್ದೇಶದಿಂದ ಜರ್ಕಿನ್‌ಗಳನ್ನು ವಿತರಿಸಲಾಯಿತು. ಅಲ್ಲದೇ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಶಾಲಾ ಮಕ್ಕಳಿಗೆ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಾಲಾ ಬ್ಯಾಗ್‌ಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಹರೀಶ್ ಬಾಬು, ಶಾರದಾ, ಸಮರ್ಥ, ಪ್ರೀತಮ್, ಅಬ್ದುಲ್ ಜಬ್ಬಾರ್, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಎನ್. ಮಾಲತೇಶ್, ಉಪಾಧ್ಯಕ್ಷ ರಾಮು ಜಿ., ಪ್ರಧಾನ ಕಾರ್ಯದರ್ಶಿ ನಜೀರ್, ಪಾರ್ಥಿಬನ್, ದುರ್ಗೋಜಿ, ಪ್ರಶಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಈ ವೇಳೆ ಮಾತನಾಡಿದ ಗಣ್ಯರು, ಪತ್ರಿಕಾ ವಿತರಕರು ಪ್ರತಿದಿನ ಮುಂಜಾನೆ ಜನರಿಗೆ ಸುದ್ದಿ ತಲುಪಿಸುವ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಅವರ ಶ್ರಮವನ್ನು ಗುರುತಿಸಿ ಇಂತಹ ಪ್ರೋತ್ಸಾಹದಾಯಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಮಕ...

Prof. ಕೆ. ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಇಮೇಜ್
  ಶಿವಮೊಗ್ಗ , ಜೂನ್ 16: ಪ್ರಾಧ್ಯಾಪಕ ಕೆ. ಎಸ್. ಭಗವಾನ್ ಅವರು ಹಿಂದೂ ಧರ್ಮ, ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿಯು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದೆ. ಸಮಿತಿಯು ನೀಡಿರುವ ಪತ್ರದಲ್ಲಿ, ಜೂನ್ 9, 2026ರಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪ್ರೊ. ಬಿ. ಕೃಷ್ಣಪ್ಪ ಜಯಂತಿ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರೊ. ಕೆ. ಎಸ್. ಭಗವಾನ್ ಅವರು ಸಾರ್ವಜನಿಕ ಭಾಷಣದಲ್ಲಿ ಹಿಂದೂ ಧರ್ಮದ ನಂಬಿಕೆಗಳು, ಧಾರ್ಮಿಕ ಆಚರಣೆಗಳು ಮತ್ತು ಶ್ರೀರಾಮನ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವುದಾಗಿ ಆರೋಪಿಸಲಾಗಿದೆ. ಈ ಹೇಳಿಕೆಗಳು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಸಮಾಜದಲ್ಲಿ ಉದ್ವಿಗ್ನತೆ ಮತ್ತು ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರೊ. ಕೆ. ಎಸ್. ಭಗವಾನ್ ಅವರು ಈ ಹಿಂದೆಯೂ ಶ್ರೀರಾಮ, ಶ್ರೀಕೃಷ್ಣ, ಭಗವದ್ಗೀತೆ ಹಾಗೂ ಹಿಂದೂ ಧರ್ಮಗ್ರಂಥಗಳ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡ...

ಪತ್ರಕರ್ತ ರಂಗನಾಥ್ ನಿಧನಕ್ಕೆ ಗಣ್ಯರ ಸಂತಾಪ

ಇಮೇಜ್
ಶಿವಮೊಗ್ಗ: ಕನ್ನಡ ಮೀಡಿಯಂ 24x7 ವಾಹಿನಿಯ ಮಾರುಕಟ್ಟೆ ಪ್ರತಿನಿಧಿಯಾಗಿದ್ದ ಹಾಗೂ ಈ ಹಿಂದೆ ಜನವಾರ್ತೆ, ನಮ್ಮನಾಡು, ಕನ್ನಡಪ್ರಭ ಮತ್ತು ಎಚ್ಚರಿಕೆ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ರಂಗನಾಥ್ (44) ಅವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮಧ್ಯಾಹ್ನ ಅವರು ನಿಧನರಾದರು. ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಸ್ನೇಹ ಬಳಗವನ್ನು ಹೊಂದಿದ್ದ ರಂಗನಾಥ್ ಅವರು ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನವು ಪತ್ರಿಕಾ ವಲಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಹೋದ್ಯೋಗಿಗಳು ಹಾಗೂ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ತಾಯಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕುಟುಂಬದ ಸದಸ್ಯರು ಮತ್ತು ಅಪಾರ ಬಂಧು-ಬಳಗದ ಆಕ್ರಂದನ ಮುಗಿಲು ಮುಟ್ಟಿದೆ. ರಂಗನಾಥ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶಿವಮೊಗ್ಗ ನಗರದ ತ್ರಿಮೂರ್ತಿ ನಗರ, ನಾಲ್ಕನೇ ತಿರುವಿನಲ್ಲಿರುವ ಅವರ ನಿವಾಸದಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯಕ್ರಿಯೆ ನೆರವೇರಲಿದೆ. ಅವರ ನಿಧನಕ್ಕೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪತ್ರಕರ್ತರು, ಸಾರ್ವಜನಿಕರು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ...

ವಾಲಕೇಶಪುರ ಗ್ರಾಮದ ವಾಡಿಕೆ ರಸ್ತೆ ದುರಸ್ತಿಗೆ ಅಡ್ಡಿ: ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರಿಂದ, ಮಹಿಳೆಯರಿಂದ, ಮಕ್ಕಳಿಂದ ಮನವಿ

ಇಮೇಜ್
  ಶಿವಮೊಗ್ಗ, ಜೂನ್ 15: ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಹೋಬಳಿಯ ವಾಲಕೇಶಪುರ ಗ್ರಾಮದ ಪ್ರಮುಖ ವಾಡಿಕೆ ರಸ್ತೆಯನ್ನು ದುರಸ್ತಿಗೊಳಿಸಲು ಕೆಲವರು ಅಡ್ಡಿಪಡಿಸುತ್ತಿರುವುದಾಗಿ ಆರೋಪಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮಸ್ಥರ ಮಾಹಿತಿ ಪ್ರಕಾರ, ವಾಲಕೇಶಪುರವು ಸ್ವಾತಂತ್ರ್ಯ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಗ್ರಾಮವಾಗಿದ್ದು, ಸುಮಾರು 15 ವರ್ಷಗಳ ಹಿಂದೆ ಕಂದಾಯ ಗ್ರಾಮವಾಗಿ ಘೋಷಿಸಲ್ಪಟ್ಟಿದೆ. ಕಳೆದ ಸುಮಾರು 80 ವರ್ಷಗಳಿಂದ ಮುದುವಾಲ ಮುಖ್ಯ ರಸ್ತೆಯಿಂದ ವಾಲಕೇಶಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 1 ಕಿಲೋಮೀಟರ್ ಉದ್ದದ ವಾಡಿಕೆ ರಸ್ತೆ ಗ್ರಾಮಸ್ಥರ ಸಂಚಾರಕ್ಕೆ ಪ್ರಮುಖ ಮಾರ್ಗವಾಗಿದೆ. ಕಂದಾಯ ಗ್ರಾಮವಾಗಿ ಘೋಷಿಸಿದ ಬಳಿಕ ಜಿಲ್ಲಾಡಳಿತವು ಈ ವಾಡಿಕೆ ರಸ್ತೆಗೆ ಜಲ್ಲಿ ಬಿಚ್ಚಿಸಿ ಗ್ರಾಮಸ್ಥರ ಓಡಾಟಕ್ಕೆ ಅನುಕೂಲ ಕಲ್ಪಿಸಿತ್ತು. ಆದರೆ ಇತ್ತೀಚೆಗೆ ಜಿಲ್ಲಾಡಳಿತವು ಧನದ ಮುಪ್ಪತ್ತಿನ ಜಾಗವನ್ನು ರೈತರಿಗೆ ಆರ್‌ಟಿಸಿ ಮಾಡಿಕೊಟ್ಟಿದ್ದು, ಈವರೆಗೂ ಪೊಡ್ ಮಾಡಿ ಗಡಿ ಗುರುತು ಮಾಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಾಲಕೇಶಪುರ ಗ್ರಾಮದಲ್ಲಿ ಹಿಂದುಳಿದ ಹಾಗೂ ಆರ್ಯದ್ರಾವಿಡ ಸಮುದಾಯದ ಬಡ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಈ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಆಯ್ಕೆ ಮಾಡಿತ್ತು. ಆದರೆ ಈಗ ಪಕ್ಕದ ಮುದುವಾಲ ...

ರಕ್ತ ನೀಡಿ, ಜೀವಗಳನ್ನು ಉಳಿಸಿ : ರೋಟರಿ ಜಿ.ವಿಜಯ್ ಕುಮಾರ್

ಇಮೇಜ್
ಶಿವಮೊಗ್ಗ: ಆರೋಗ್ಯವಂತ ವ್ಯಕ್ತಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು. ರಕ್ತದಾನ ಮಾಡುವುದರಿಂದ ಜೀವ ಉಳಿಸುವ ಶ್ರೇಷ್ಠ ಕಾರ್ಯದಲ್ಲಿ ಕೈಜೋಡಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್ ಹೇಳಿದರು. ನಗರದ ಹಳೆ ಜೈಲು ವಿನೋಬನಗರದ ಆವರಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವಿಶೇಷ ಸಹಕಾರದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಶೇಷ ಕಾರ್ಯಪಡೆ, ಸಿಮ್ಸ್, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ,  ರಕ್ತ ನಿಧಿ ಕೇಂದ್ರ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಸ್ವಯಂಪ್ರೇರಿತ ರಕ್ತದಾನಿಗಳನ್ನು ಗೌರವಿಸಲು, ಸುರಕ್ಷಿತ ರಕ್ತ ಮತ್ತು ಪ್ಲಾಸ್ಮಾದ ನಿರಂತರ ಅಗತ್ಯತೆಯ ಬಗ್ಗೆ ಜಾಗತಿಕ ಜಾಗೃತಿ ಮೂಡಿಸಲು ವಾರ್ಷಿಕವಾಗಿ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನವ ರಕ್ತದ ಗುಂಪನ್ನು ಕಂಡುಹಿಡಿದ ವಿಜ್ಞಾನಿ ಕಾರ್ಲ್ ಲ್ಯಾಂಡ್ಸ್ಟೈನರ್‌ ಅವರ ಜನ್ಮ ವಾರ್ಷಿಕೋತ್ಸವವನ್ನು ಸ್ಮರಿಸುತ್ತದೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆ ಪೊಲೀಸ್ ಇನ್ಸಪೆಕ್ಟರ್ ಕೀರ್ತಿ ಕುಮಾರ್ ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲಾಗುವುದಿಲ್ಲ. ಅದು ನೀಡಲು ಸಿದ್ಧರಿರುವ ಆರೋಗ್ಯವಂತ ಮಾನವ ದಾನಿಗಳಿಂದ ಮಾತ್ರ ಬರಬಹುದು. ನಿಯಮಿತವಾಗಿ ರಕ್ತದಾನ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬ...

ಯಲವಟ್ಟಿ ಬಳಿ ರೈಲಿಗೆ ಸಿಲುಕಿ ಪಶುವೈದ್ಯಕೀಯ ವಿದ್ಯಾರ್ಥಿ ಸಾವು; ಆತ್ಮಹತ್ಯೆ ಶಂಕೆ

  ಶಿವಮೊಗ್ಗ ನಗರದ ಯಲವಟ್ಟಿ ರೈಲು ಹಳಿ ಸಮೀಪ ವಿದ್ಯಾರ್ಥಿಯೊಬ್ಬ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಸುಮಾರು 5.30ರ ವೇಳೆಗೆ ಈ ದುರ್ಘಟನೆ ನಡೆದಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತನನ್ನು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಧುಸೂಧನ್ (21) ಎಂದು ಗುರುತಿಸಲಾಗಿದೆ. ಅವರು ಪಶುವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದರು. ಯಲವಟ್ಟಿ ಸಮೀಪ ರೈಲು ಹಳಿಯ ಮೇಲೆ ರೈಲಿಗೆ ಸಿಲುಕಿ ಮೃತಪಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆರಂಭದಲ್ಲಿ ಮೃತನ ಗುರುತು ಪತ್ತೆಯಾಗಿರಲಿಲ್ಲ. ಬಳಿಕ ತನಿಖೆ ನಡೆಸಿದ ಅಧಿಕಾರಿಗಳು ಇಂದು ಮೃತನ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಮಧುಸೂಧನ್ ಯಾಕೆ ಈ ನಿರ್ಧಾರ ಕೈಗೊಂಡರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲವೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಮೃತನ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಘಟನಾ ಸ್ಥಳದಲ್ಲಿ ಮೃತನ ಬೈಕ್, ಚಪ್ಪಲಿಗಳು ಪತ್ತೆಯಾಗಿದೆ. ಬೈಕ್ ನಲ್ಲಿ ಬಂದು ಮಧು ಸೂಧನ್ ತಲೆಕೊಟ...

ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನಕ್ಕಿಂತ ಬೇರೆ ದಾನ ಮತ್ತೊಂದಿಲ್ಲ

ಇಮೇಜ್
ಶಿವಮೊಗ್ಗ: ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯವಾಗಿದ್ದು, ರಕ್ತದಾನದಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.  ಲ್ಯಾಂಡ್ ಕಾರ್ಲ್ ಸ್ಟೀನರ್ ಜನ್ಮದಿನ  ಮತ್ತು ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ರಕ್ತದ ಬೇಡಿಕೆ ಹೆಚ್ಚಿದ್ದು, ಯುವಕರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರವಾದ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ. ದಾನಿಗಳ ದೇಹದಿಂದ ಸಂಗ್ರಹಿಸಿ ಅದನ್ನು ಪರೀಕ್ಷಿಸಿ ಇನ್ನೊಬ್ಬರಿಗೆ ದಾನ ಮಾಡುವ ಪ್ರಕ್ರಿಯೆ ಆಗಿದೆ. ಯುವಜನರು ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡುವುದರ ಜೊತೆಗೆ ಮತ್ತೊಬ್ಬರನ್ನು ಸಹ ಪ್ರೇರೇಪಿಸಿ ರಕ್ತದಾನಿಗಳನ್ನಾಗಿ ಮಾಡಬೇಕು ಎಂದು ಕರೆ ನೀಡಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ, ರಕ್ತದಾನಿ ಜಿ.ವಿಜಯ್ ಕುಮಾರ್ ಮಾತನಾಡಿ, ಪ್ರತಿಯೊಬ್ಬ ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಮೂರು ಬಾರಿ ರ...

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಹಾನಿಗೊಳಗಾದ ರಾಷ್ಟ್ರಧ್ವಜ: ತಕ್ಷಣ ಬದಲಾಯಿಸಲು ಸಾರ್ವಜನಿಕರ ಆಗ್ರಹ

ಇಮೇಜ್
  ಶಿವಮೊಗ್ಗ, ಜೂನ್ 13: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಹಾರಾಡುತ್ತಿರುವ ರಾಷ್ಟ್ರಧ್ವಜವು ಹಾನಿಗೊಳಗಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಗೌರವ ಮತ್ತು ಸ್ವಾಭಿಮಾನದ ಪ್ರತೀಕವಾಗಿರುವ ತ್ರಿವರ್ಣ ಧ್ವಜವು ಹರಿದುಹೋಗಿರುವ ಅಥವಾ ಹಾಳಾಗಿರುವ ಸ್ಥಿತಿಯಲ್ಲಿಯೇ ಪ್ರದರ್ಶಿಸಲಾಗುತ್ತಿರುವುದು ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಿದಂತಾಗಿದೆ ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ. ರೈಲ್ವೆ ಅಧಿಕಾರಿಗಳು ಕೂಡಲೇ ಹಾನಿಗೊಳಗಾದ ಧ್ವಜವನ್ನು ತೆರವುಗೊಳಿಸಿ, ಹೊಸ ರಾಷ್ಟ್ರಧ್ವಜವನ್ನು ನಿಯಮಾನುಸಾರ ಹಾರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ರಾಷ್ಟ್ರಧ್ವಜದ ಗೌರವ ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಸರ್ಕಾರಿ ಸಂಸ್ಥೆಗಳು ಈ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ. ಧ್ವಜ ಸಂಹಿತೆ ಏನು ಹೇಳುತ್ತದೆ? ಭಾರತದ ಧ್ವಜ ಸಂಹಿತೆ (Flag Code of India, 2002) ಪ್ರಕಾರ: "A damaged or dishevelled Flag shall not be displayed." ಅಂದರೆ, ಹಾನಿಗೊಳಗಾದ ಅಥವಾ ಹರಿದುಹೋದ ರಾಷ್ಟ್ರಧ್ವಜವನ್ನು ಯಾವುದೇ ಕಾರಣಕ್ಕೂ ಪ್ರದರ್ಶಿಸಬಾರದು. ಕಾನೂನು ಕ್ರಮ ಏನು? ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971 (Prevention of Insults to National Honour Act, 1971) ರ ಸೆಕ್ಷನ್ 2ರ ಪ್ರಕಾರ ರಾಷ್ಟ್ರಧ್ವಜಕ್ಕೆ ಉದ...

ಗಾಂಧಿ ಬಜಾರ್‌ನಲ್ಲಿ ಅಕ್ರಮ ಇಸ್ಪೀಟ್ ಅಡ್ಡೆಯಲ್ಲಿ ಭೀಕರ ಹತ್ಯೆ, ವೈಷಮ್ಯವೇ ಕಾರಣ : ತನಿಖೆ ಚುರುಕು

ಇಮೇಜ್
  ಶಿವಮೊಗ್ಗ, ಜೂನ್ 12: ಶಿವಮೊಗ್ಗ ನಗರದ ಗಾಂಧಿ ಬಜಾರ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ನಡೆದ ಭೀಕರ ಹತ್ಯೆ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಗಾಂಧಿ ಬಜಾರ್‌ನಲ್ಲಿ ಕೆಲವರ ನಡುವೆ ಏಕಾಏಕಿ ಗಲಾಟೆ ಉಂಟಾಗಿ, ಬಳಿಕ ದುಷ್ಕರ್ಮಿಗಳು ಮಚ್ಚು, ಲಾಂಗ್‌ಗಳಂತಹ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ದಾಳಿ ನಡೆಸಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೋಟೆ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಈ ಹತ್ಯೆಗೆ ಅಕ್ರಮ ಇಸ್ಪೀಟ್ ಅಡ್ಡೆಗಳ ಚಟುವಟಿಕೆಗಳು ಕಾರಣವೇ, ಹಳೆಯ ವೈಷಮ್ಯ ಹಿನ್ನೆಲೆಯೇ ಅಥವಾ ಇತರೆ ಯಾವುದೇ ಕಾರಣಗಳಿವೆಯೇ ಎಂಬುದರ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯ ವಲಯಗಳಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿದ್ದರೂ, ಅವುಗಳ ಬಗ್ಗೆ ಪೊಲೀಸ್ ಇಲಾಖೆ ಯಾವುದೇ ಅಧಿಕೃತ ದೃಢೀಕರಣ ನೀಡಿಲ್ಲ. ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂ...

"ಹೆಣ್ಣು ಮಕ್ಕಳು ಹುಟ್ಟಿದ್ದೇ ತಪ್ಪಾಯಿತೇ?" ಮೂರು ಹೆಣ್ಣು ಮಕ್ಕಳ ತಾಯಿಗೆ ಕಿರುಕುಳ; ಪತಿ ಸೇರಿ ಐವರ ವಿರುದ್ಧ ದೂರು

ಇಮೇಜ್
ಬೆಳಗಾವಿ/ಶಿವಮೊಗ್ಗ, ಜೂನ್ 10: ತಾಯಿಯ ಮಡಿಲಿಗೆ ಮಗು ಬಂದಾಗ ಅದು ಗಂಡೋ, ಹೆಣ್ಣೋ ಎಂಬ ಪ್ರಶ್ನೆಗಿಂತ ಅದು ಬದುಕಿನ ಹೊಸ ಬೆಳಕು ಎನ್ನುವುದು ಸಮಾಜದ ಮೌಲ್ಯವಾಗಬೇಕು. ಆದರೆ, ಇನ್ನೂ ಕೆಲ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವೇ ಮಹಿಳೆಯ ಪಾಲಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂಬುದಕ್ಕೆ ಈ ಘಟನೆ ಮತ್ತೊಂದು ನೋವಿನ ಉದಾಹರಣೆಯಾಗಿದೆ. ಮೂರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದ ಕಾರಣಕ್ಕೆ ಪತ್ನಿಗೆ ನಿರಂತರ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದಡಿ ಶಿವಮೊಗ್ಗ ಮೂಲದ ಪತಿ ಸೇರಿದಂತೆ ಐವರ ವಿರುದ್ಧ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿಯ ಶಾಸ್ತ್ರಿನಗರ ನಿವಾಸಿ ಸುಮನ್ ಪ್ರಸಾದ್ ವಾಕುಡೆ (26) ಅವರು ನೀಡಿದ ದೂರಿನ ಪ್ರಕಾರ, 2021ರ ಏಪ್ರಿಲ್ 22ರಂದು ಶಿವಮೊಗ್ಗ ಮೂಲದ ಪ್ರಸಾದ್ ನಾರಾಯಣ ವಾಕುಡೆ ಅವರೊಂದಿಗೆ ವಿವಾಹವಾಗಿತ್ತು. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, 2022ರ ಜುಲೈ 31ರಂದು ಅವಳಿ ಹೆಣ್ಣು ಮಕ್ಕಳಾದ ಮೇಘಾ ಮತ್ತು ಮೇಘನಾ ಜನಿಸಿದ ಬಳಿಕ ಪತಿಯ ವರ್ತನೆ ಬದಲಾಗತೊಡಗಿತು ಎಂದು ಆರೋಪಿಸಲಾಗಿದೆ. "ನಮ್ಮ ಮನೆತನದಲ್ಲಿ ಎಲ್ಲರಿಗೂ ಗಂಡು ಮಕ್ಕಳು ಹುಟ್ಟಿದ್ದಾರೆ. ನಿನಗೆ ಮಾತ್ರ ಹೆಣ್ಣು ಮಕ್ಕಳು ಹುಟ್ಟಿದ್ದಾರೆ" ಎಂದು ಅವಮಾನಿಸಿ, ಮದ್ಯಪಾನ ಮಾಡಿ ಬಂದು ಜಗಳವಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹಲ್ಲೆ ನಡೆಸುವುದು ಸಾಮಾನ್ಯವಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ...

ಖಾಸಗಿ ಶಾಲೆಗಳ ಡೊನೇಷನ್ ದಂಧೆ ವಿರುದ್ಧ SIT ತನಿಖೆಗೆ ಆಗ್ರಹ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ HRJC ಬೃಹತ್ ಸಾರ್ವಜನಿಕ ಹಿತರಕ್ಷಣಾ ದೂರು

ಇಮೇಜ್
ಶಿವಮೊಗ್ಗ, ಜೂನ್ 10: ರಾಜ್ಯದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ನಡೆಯುತ್ತಿದೆ ಎನ್ನಲಾದ ಕಾನೂನುಬಾಹಿರ ಡೊನೇಷನ್ ದಂಧೆ ಹಾಗೂ ವಿವಿಧ ಹೆಸರಿನಲ್ಲಿ ಶುಲ್ಕ ಸುಲಿಗೆ ವಿರುದ್ಧ ವಿಶೇಷ ತನಿಖಾ ದಳ (SIT) ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಮಾನವ ಹಕ್ಕುಗಳ ನ್ಯಾಯ ಮಂಡಳಿ (HRJC) ಆಗ್ರಹಿಸಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಬೃಹತ್ ಸಾರ್ವಜನಿಕ ಹಿತರಕ್ಷಣಾ ದೂರು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ HRJC ಕರ್ನಾಟಕ ರಾಜ್ಯ ಉಪಾಧ್ಯಕ್ಷ ಎನ್.ಎಂ. ಸಿಬ್ಗತ್ ಉಲ್ಲಾ , ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಿ ಪೋಷಕರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು ಆರೋಪಿಸಿದರು. "ಪ್ರವೇಶಾತಿ ಸಂದರ್ಭದಲ್ಲಿ ಯಾವುದೇ ರಶೀದಿ ನೀಡದೆ ಲಕ್ಷಾಂತರ ರೂಪಾಯಿಗಳನ್ನು ಡೊನೇಷನ್ ರೂಪದಲ್ಲಿ ವಸೂಲಿ ಮಾಡಲಾಗುತ್ತಿದೆ. ಕಟ್ಟಡ ಅಭಿವೃದ್ಧಿ ಶುಲ್ಕ, ಸ್ಮಾರ್ಟ್ ಕ್ಲಾಸ್ ಶುಲ್ಕ, ಪಠ್ಯಪುಸ್ತಕ ಹಾಗೂ ಸಮವಸ್ತ್ರ ಶುಲ್ಕ ಸೇರಿದಂತೆ ವಿವಿಧ ಹೆಸರಿನಲ್ಲಿ ಪೋಷಕರಿಂದ ಅನಧಿಕೃತ ಹಣ ಸಂಗ್ರಹಿಸಲಾಗುತ್ತಿದೆ. ಮಕ್ಕಳ ಭವಿಷ್ಯಕ್ಕಾಗಿ ಹೆತ್ತವರು ಸಾಲ ಮಾಡಿ, ಒಡವೆ ಅಡವಿಟ್ಟು ಹಣ ಪಾವತಿಸುವ ದುಸ್ಥಿತಿ ನಿರ್ಮಾಣವಾಗಿದೆ," ಎಂದು ಅವರು ಬೇಸರ ವ್ಯಕ್ತಪಡಿಸಿದರು. ಪ್ರಮುಖ ಆಗ್ರಹಗಳು HRJC ವ...

ಜಮೀರ್ ಅಹಮದ್ ಖಾನ್‌ಗೆ ಡಿಸಿಎಂ ಸ್ಥಾನ ನೀಡಲು ಆಗ್ರಹಿಸಿ ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದ ಪ್ರತಿಭಟನೆ

ಇಮೇಜ್
ಶಿವಮೊಗ್ಗ, ಜೂ.8: ರಾಜ್ಯದ ಹಿರಿಯ ಸಚಿವರಾದ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನೇಮಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಮುಸ್ಲಿಂ ಸಮುದಾಯದ ವತಿಯಿಂದ ಭಾರಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮಾತನಾಡಿ, ಜಮೀರ್ ಅಹಮದ್ ಖಾನ್ ಅವರು ಜನಪರ, ಜಾತ್ಯಾತೀತ ಮೌಲ್ಯಗಳನ್ನು ಹೊಂದಿರುವ ಪ್ರಭಾವಿ ನಾಯಕರಾಗಿದ್ದು, ಅಹಿಂದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಶಾಸಕರಾಗಿ ಮತ್ತು ಸಚಿವರಾಗಿ ಅವರು ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷಕ್ಕೆ ದಶಕಗಳಿಂದ ಬೆಂಬಲ ನೀಡುತ್ತಿರುವ ಮುಸ್ಲಿಂ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕಿದ್ದು, ಜಮೀರ್ ಅಹಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿಯ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿರುತ್ತದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೆ, ಮುಸ್ಲಿಂ ಸಮುದಾಯದ ಇನ್ನಷ್ಟು ಅರ್ಹ ಶಾಸಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಈ ಕುರಿತು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಿ ವ್ಯಾಪಕ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಸ್ಲಿಂ ಹಕ್ಕುಗಳ ವೇದಿಕೆ...